BREAKING NEWS

ತಾಕತ್ ಇದ್ದರೆ ಭಜರಂಗದಳ ಬ್ಯಾನ್ ಮಾಡಿ ತೋರಿಸಿ : ಕಾಂಗ್ರೆಸ್ ಗೆ ಶೋಭಾ ಕರಂದ್ಲಾಜೆ ಸವಾಲ್

ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಉಭಯ ಪಕ್ಷಗಳು ಅಬ್ಬರದ ಪ್ರಚಾರದ ಜೊತೆಗೆ ವಿವಿಧ ಆಶ್ವಾಸನೆಗಳನ್ನ ಕೊಡುತ್ತಿದೆ. ಅದರಂತೆ ಇಂದು ಕಾಂಗ್ರೆಸ್​ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಕುರಿತು ಮಾತನಾಡಿದ ಶೋಭಾ ಕರಂದ್ಲಾಜೆ ‘ವಿನಾಶಕಾಲೆ, ವಿಪರೀತ ಬುದ್ದಿ ಎಂಬ ಗಾದೆ ಮಾತಿದೆ. ವಿನಾಶ ಬಂದಾಗ ಬುದ್ದಿ ಹೊಳೆಯಲ್ಲ, ವಿಪರೀತವಾಗಿ ಯೋಚನೆ ಮಾಡ್ತಾರೆ. ಕಾಂಗ್ರೆಸ್‌ಗೂ ವಿನಾಶ ಕಾಲ ಬಂದಿದೆ ಎಂದರು.

ಬೆಂಗಳೂರಿನಲ್ಲಿ ಸುದ್ದಿಗೊಷ್ಠಿ ನಡೆಸಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ,ಪಿಎಫ್‌ಐ ಬ್ಯಾನ್ ಮಾಡುವ ವಿಚಾರ ಕುರಿತು ಮಾತನಾಡಿದ ಅವರು ‘ ಪಿಎಫ್‌ಐ ಬಾಂಬ್ ಬ್ಲಾಸ್ಟ್ ಮಾಡಿದ್ದು, ಈಗಾಗಲೇ ಅದನ್ನ ಬ್ಯಾನ್ ಮಾಡಲಾಗಿದೆ. ಆದ್ರೆ, ಇವತ್ತು ಕಾಂಗ್ರೆಸ್ ಹೇಳ್ತಿದೆ ಪಿಎಫ್‌ಐ ಬ್ಯಾನ್ ಮಾಡ್ತೀವಿ ಅಂತ. ಆದ್ರೆ, ಅವರ ಉದ್ದೇಶ ಭಜರಂಗದಳ ಬ್ಯಾನ್ ಮಾಡಬೇಕೆಂದು. ಕಾಂಗ್ರೆಸ್ ಈ ಹಿಂದೆ ಮೂರು ಬಾರಿ ಆರ್‌ಎಸ್ಎಸ್ ಬ್ಯಾನ್ ಮಾಡಿತ್ತು. ಆದ್ರೆ, ಇವತ್ತು ಜಗತ್ತಿನ ಅತಿ ದೊಡ್ಡ ಸಂಘಟನೆ ಆರ್‌ಎಸ್ಎಸ್ ಆಗಿದೆ. ಆರ್‌ಎಸ್ಎಸ್ ನಲ್ಲಿ ವಿವಿಧ ವಿಭಾಗ ಕೆಲಸ ಮಾಡ್ತಿದೆ ಎಂದರು.

ತಾಕತ್ ಇದ್ದರೆ, ಭಜರಂಗದಳ ಬ್ಯಾನ್ ಮಾಡಿ ತೋರಿಸಿ‌ : ನಿಮಗೆ ತಾಕತ್ ಇದ್ದರೆ, ಭಜರಂಗದಳ ಬ್ಯಾನ್ ಮಾಡಿ ತೋರಿಸಿ. ಆರ್‌ಎಸ್ಎಸ್ ನ ಯುವಕರ ದಳ ಭಜರಂಗದಳ, ಇದು ದೇಶದ ಪರ ಕೆಲಸ ಮಾಡುತ್ತಿರುವ ಸಂಘಟನೆ, ದೇಶ ವಿರೋಧಿ ಸಂಘಟನೆ ಅಲ್ಲ. ಇವತ್ತು ಭಜರಂಗದಳ ಮತ್ತು ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿ ಕಾಂಗ್ರೆಸ್ ಇಟ್ಟಿದೆ. ದೇಶದ್ರೋಹಿ ಪಿಎಫ್ಐ ಜತೆ ದೇಶಪ್ರೇಮಿ ಭಜರಂಗದಳ ಹೋಲಿಸಿರೋದು ಸರಿಯಲ್ಲ. ನಿಮಗೆ ತಾಕತ್ ಇದ್ದರೆ ಭಜರಂಗದಳ ನಿಷೇಧ ಮಾಡಿ ನೋಡಿ. ಆಗ ನಾವೂ ದೇಶಾದ್ಯಂತ ತೋರಿಸ್ತೇವೆ. ಭಜರಂಗದಳದ ನಿಷೇಧವನ್ನು ಹಿಂದೂ ಸಮಾಜ ಒಪ್ಪಲ್ಲ. ಮುಸಲ್ಮಾನರ ಮುಖವಾಡ ಸಿದ್ದರಾಮಯ್ಯ ಎಂದು ನಾನು ಹಿಂದೆ ಹೇಳಿದ್ದೆ. ಅದು ಇವತ್ತು ಸಾಬೀತಾಗಿದೆ. ನಾನೂ ಭಜರಂಗದಳದ ಕಾರ್ಯಕರ್ತೆ. ತಾಕತ್ ಇದ್ರೆ ನನ್ನನ್ನೂ ಅರೆಸ್ಟ್ ಮಾಡಿ ಎಂದು ಕಾಂಗ್ರೆಸ್​ಗೆ ಶೋಭಾ ನೇರ ಸವಾಲು ಹಾಕಿದ್ದಾರೆ.

ನೀವು ಅಧಿಕಾರಕ್ಕೆ ಬಂದ್ರೆ, 10 ಸಾವಿರ ಕೋಟಿ ಮುಸ್ಲಿಮರಿಗೆ ಮೀಸಲು, ಗೋ‌ಹತ್ಯೆ ಕಾಯ್ದೆ ವಾಪಸ್, ಮತಾಂತರ ಕಾಯ್ದೆ ವಾಪಸ್ ಎಂದು ಹೇಳಿದ್ದೀರಿ. ತಾಯಿ ಎದೆ ಹಾಲು ಇಲ್ಲದಾಗ ಗೋ ಹಾಲನ್ನ ಕುಡೀತಿವಿ. ಆದ್ರೆ, ನೀವು ಗೋ ಹತ್ಯೆ ಕಾಯ್ದೆಯನ್ನೇ ತೆಗೀತೀವಿ ಅಂತ ಹೇಳ್ತೀರಿ. ಇವತ್ತು ಪಿಎಫ್‌ಐ ಇಸ್ಲಾಂ ಜೊತೆ, ಐಸಿಸ್ ಜೊತೆ ಸಂಬಂಧ ಇಟ್ಟುಕೊಂಡಿದ್ರು. ಶಿವಮೊಗ್ಗದಲ್ಲಿ ಎನ್ಐಎ ದಾಳಿ ನಡೆಸಿದಾಗ ಸಿಕ್ಕಿಬಿದ್ರು. ಅವರೆಲ್ಲರೂ ಎನ್ಐಎ ವಿಚಾರಣೆ ನಡೆಸುತ್ತಿದೆ. ಯಾರೆಲ್ಲಾ ಬಾಂಬ್ ಬ್ಲಾಸ್ಟ್ ನಲ್ಲಿ ಸಿಕ್ಕಿಬಿದ್ರು ಅವರೆಲ್ಲ ನಮ್ಮ ಅಣ್ಣ ತಮ್ಮಂದಿರು ಅಂತ ಡಿಕೆಶಿ ಹೇಳಿದ್ದಾರೆ. ಈ ಎಲ್ಲಾ ಕೃತ್ಯಗಳಿಗೆ ಸಿದ್ದರಾಮಯ್ಯ, ಡಿಕೆಶಿ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೀಗ ನಾವೆಲ್ಲರೂ ಒಟ್ಟಾಗಿ ಎದುರಿಸಬೇಕು. ನಿಮ್ಮ ಅಜ್ಜಿ, ತಾತನ ಕಾಲದಲ್ಲಿ RSS ಬ್ಯಾನ್ ಮಾಡಿದ್ರಿ, ಈಗ ಏನೂ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾವು ವಿಶ್ವದ, ದೇಶದ ಅತಿ ದೊಡ್ಡ ಸಂಘಟನೆ, ಅತಿ ದೊಡ್ಡ ಪಕ್ಷ, ನಮ್ಮ ನಾಯಕ ವಿಶ್ವದ ದೊಡ್ಡ ನಾಯಕ. ನೀವು ಕೇವಲ ಮುಸ್ಲಿಂ ಓಟಲ್ಲಿ ಗೆದ್ದು ಬನ್ನಿ, ಕಾಂಗ್ರೆಸ್‌ಗೆ ತಾಕತ್ ಇದೆಯಾ.? ಈ ಪ್ರಣಾಳಿಕೆಯಲ್ಲಿ ಕೊಟ್ಟಿರೋದು ಕೇವಲ ಒಂದು ಧರ್ಮದ ಓಲೈಕೆ ಮಾಡಲು, ಅವರನ್ನೇ ಓಲೈಕೆ ಮಾಡಿ, ಹಿಂದೂಗಳ ಓಟ್ ನಿಮಗೆ ಸಿಗೋದಿಲ್ಲ ಎಂದು ಕಿಡಿಕಾಡಿದ್ದಾರೆ.

lokesh

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

6 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

6 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

6 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

6 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

7 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

7 hours ago