ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಉಭಯ ಪಕ್ಷಗಳು ಅಬ್ಬರದ ಪ್ರಚಾರದ ಜೊತೆಗೆ ವಿವಿಧ ಆಶ್ವಾಸನೆಗಳನ್ನ ಕೊಡುತ್ತಿದೆ. ಅದರಂತೆ ಇಂದು ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಕುರಿತು ಮಾತನಾಡಿದ ಶೋಭಾ ಕರಂದ್ಲಾಜೆ ‘ವಿನಾಶಕಾಲೆ, ವಿಪರೀತ ಬುದ್ದಿ ಎಂಬ ಗಾದೆ ಮಾತಿದೆ. ವಿನಾಶ ಬಂದಾಗ ಬುದ್ದಿ ಹೊಳೆಯಲ್ಲ, ವಿಪರೀತವಾಗಿ ಯೋಚನೆ ಮಾಡ್ತಾರೆ. ಕಾಂಗ್ರೆಸ್ಗೂ ವಿನಾಶ ಕಾಲ ಬಂದಿದೆ ಎಂದರು.
ಬೆಂಗಳೂರಿನಲ್ಲಿ ಸುದ್ದಿಗೊಷ್ಠಿ ನಡೆಸಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ,ಪಿಎಫ್ಐ ಬ್ಯಾನ್ ಮಾಡುವ ವಿಚಾರ ಕುರಿತು ಮಾತನಾಡಿದ ಅವರು ‘ ಪಿಎಫ್ಐ ಬಾಂಬ್ ಬ್ಲಾಸ್ಟ್ ಮಾಡಿದ್ದು, ಈಗಾಗಲೇ ಅದನ್ನ ಬ್ಯಾನ್ ಮಾಡಲಾಗಿದೆ. ಆದ್ರೆ, ಇವತ್ತು ಕಾಂಗ್ರೆಸ್ ಹೇಳ್ತಿದೆ ಪಿಎಫ್ಐ ಬ್ಯಾನ್ ಮಾಡ್ತೀವಿ ಅಂತ. ಆದ್ರೆ, ಅವರ ಉದ್ದೇಶ ಭಜರಂಗದಳ ಬ್ಯಾನ್ ಮಾಡಬೇಕೆಂದು. ಕಾಂಗ್ರೆಸ್ ಈ ಹಿಂದೆ ಮೂರು ಬಾರಿ ಆರ್ಎಸ್ಎಸ್ ಬ್ಯಾನ್ ಮಾಡಿತ್ತು. ಆದ್ರೆ, ಇವತ್ತು ಜಗತ್ತಿನ ಅತಿ ದೊಡ್ಡ ಸಂಘಟನೆ ಆರ್ಎಸ್ಎಸ್ ಆಗಿದೆ. ಆರ್ಎಸ್ಎಸ್ ನಲ್ಲಿ ವಿವಿಧ ವಿಭಾಗ ಕೆಲಸ ಮಾಡ್ತಿದೆ ಎಂದರು.
ತಾಕತ್ ಇದ್ದರೆ, ಭಜರಂಗದಳ ಬ್ಯಾನ್ ಮಾಡಿ ತೋರಿಸಿ : ನಿಮಗೆ ತಾಕತ್ ಇದ್ದರೆ, ಭಜರಂಗದಳ ಬ್ಯಾನ್ ಮಾಡಿ ತೋರಿಸಿ. ಆರ್ಎಸ್ಎಸ್ ನ ಯುವಕರ ದಳ ಭಜರಂಗದಳ, ಇದು ದೇಶದ ಪರ ಕೆಲಸ ಮಾಡುತ್ತಿರುವ ಸಂಘಟನೆ, ದೇಶ ವಿರೋಧಿ ಸಂಘಟನೆ ಅಲ್ಲ. ಇವತ್ತು ಭಜರಂಗದಳ ಮತ್ತು ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿ ಕಾಂಗ್ರೆಸ್ ಇಟ್ಟಿದೆ. ದೇಶದ್ರೋಹಿ ಪಿಎಫ್ಐ ಜತೆ ದೇಶಪ್ರೇಮಿ ಭಜರಂಗದಳ ಹೋಲಿಸಿರೋದು ಸರಿಯಲ್ಲ. ನಿಮಗೆ ತಾಕತ್ ಇದ್ದರೆ ಭಜರಂಗದಳ ನಿಷೇಧ ಮಾಡಿ ನೋಡಿ. ಆಗ ನಾವೂ ದೇಶಾದ್ಯಂತ ತೋರಿಸ್ತೇವೆ. ಭಜರಂಗದಳದ ನಿಷೇಧವನ್ನು ಹಿಂದೂ ಸಮಾಜ ಒಪ್ಪಲ್ಲ. ಮುಸಲ್ಮಾನರ ಮುಖವಾಡ ಸಿದ್ದರಾಮಯ್ಯ ಎಂದು ನಾನು ಹಿಂದೆ ಹೇಳಿದ್ದೆ. ಅದು ಇವತ್ತು ಸಾಬೀತಾಗಿದೆ. ನಾನೂ ಭಜರಂಗದಳದ ಕಾರ್ಯಕರ್ತೆ. ತಾಕತ್ ಇದ್ರೆ ನನ್ನನ್ನೂ ಅರೆಸ್ಟ್ ಮಾಡಿ ಎಂದು ಕಾಂಗ್ರೆಸ್ಗೆ ಶೋಭಾ ನೇರ ಸವಾಲು ಹಾಕಿದ್ದಾರೆ.
ನೀವು ಅಧಿಕಾರಕ್ಕೆ ಬಂದ್ರೆ, 10 ಸಾವಿರ ಕೋಟಿ ಮುಸ್ಲಿಮರಿಗೆ ಮೀಸಲು, ಗೋಹತ್ಯೆ ಕಾಯ್ದೆ ವಾಪಸ್, ಮತಾಂತರ ಕಾಯ್ದೆ ವಾಪಸ್ ಎಂದು ಹೇಳಿದ್ದೀರಿ. ತಾಯಿ ಎದೆ ಹಾಲು ಇಲ್ಲದಾಗ ಗೋ ಹಾಲನ್ನ ಕುಡೀತಿವಿ. ಆದ್ರೆ, ನೀವು ಗೋ ಹತ್ಯೆ ಕಾಯ್ದೆಯನ್ನೇ ತೆಗೀತೀವಿ ಅಂತ ಹೇಳ್ತೀರಿ. ಇವತ್ತು ಪಿಎಫ್ಐ ಇಸ್ಲಾಂ ಜೊತೆ, ಐಸಿಸ್ ಜೊತೆ ಸಂಬಂಧ ಇಟ್ಟುಕೊಂಡಿದ್ರು. ಶಿವಮೊಗ್ಗದಲ್ಲಿ ಎನ್ಐಎ ದಾಳಿ ನಡೆಸಿದಾಗ ಸಿಕ್ಕಿಬಿದ್ರು. ಅವರೆಲ್ಲರೂ ಎನ್ಐಎ ವಿಚಾರಣೆ ನಡೆಸುತ್ತಿದೆ. ಯಾರೆಲ್ಲಾ ಬಾಂಬ್ ಬ್ಲಾಸ್ಟ್ ನಲ್ಲಿ ಸಿಕ್ಕಿಬಿದ್ರು ಅವರೆಲ್ಲ ನಮ್ಮ ಅಣ್ಣ ತಮ್ಮಂದಿರು ಅಂತ ಡಿಕೆಶಿ ಹೇಳಿದ್ದಾರೆ. ಈ ಎಲ್ಲಾ ಕೃತ್ಯಗಳಿಗೆ ಸಿದ್ದರಾಮಯ್ಯ, ಡಿಕೆಶಿ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೀಗ ನಾವೆಲ್ಲರೂ ಒಟ್ಟಾಗಿ ಎದುರಿಸಬೇಕು. ನಿಮ್ಮ ಅಜ್ಜಿ, ತಾತನ ಕಾಲದಲ್ಲಿ RSS ಬ್ಯಾನ್ ಮಾಡಿದ್ರಿ, ಈಗ ಏನೂ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾವು ವಿಶ್ವದ, ದೇಶದ ಅತಿ ದೊಡ್ಡ ಸಂಘಟನೆ, ಅತಿ ದೊಡ್ಡ ಪಕ್ಷ, ನಮ್ಮ ನಾಯಕ ವಿಶ್ವದ ದೊಡ್ಡ ನಾಯಕ. ನೀವು ಕೇವಲ ಮುಸ್ಲಿಂ ಓಟಲ್ಲಿ ಗೆದ್ದು ಬನ್ನಿ, ಕಾಂಗ್ರೆಸ್ಗೆ ತಾಕತ್ ಇದೆಯಾ.? ಈ ಪ್ರಣಾಳಿಕೆಯಲ್ಲಿ ಕೊಟ್ಟಿರೋದು ಕೇವಲ ಒಂದು ಧರ್ಮದ ಓಲೈಕೆ ಮಾಡಲು, ಅವರನ್ನೇ ಓಲೈಕೆ ಮಾಡಿ, ಹಿಂದೂಗಳ ಓಟ್ ನಿಮಗೆ ಸಿಗೋದಿಲ್ಲ ಎಂದು ಕಿಡಿಕಾಡಿದ್ದಾರೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…