BREAKING NEWS

ತಾಕತ್ ಇದ್ದರೆ ಭಜರಂಗದಳ ಬ್ಯಾನ್ ಮಾಡಿ ತೋರಿಸಿ : ಕಾಂಗ್ರೆಸ್ ಗೆ ಶೋಭಾ ಕರಂದ್ಲಾಜೆ ಸವಾಲ್

ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಉಭಯ ಪಕ್ಷಗಳು ಅಬ್ಬರದ ಪ್ರಚಾರದ ಜೊತೆಗೆ ವಿವಿಧ ಆಶ್ವಾಸನೆಗಳನ್ನ ಕೊಡುತ್ತಿದೆ. ಅದರಂತೆ ಇಂದು ಕಾಂಗ್ರೆಸ್​ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಕುರಿತು ಮಾತನಾಡಿದ ಶೋಭಾ ಕರಂದ್ಲಾಜೆ ‘ವಿನಾಶಕಾಲೆ, ವಿಪರೀತ ಬುದ್ದಿ ಎಂಬ ಗಾದೆ ಮಾತಿದೆ. ವಿನಾಶ ಬಂದಾಗ ಬುದ್ದಿ ಹೊಳೆಯಲ್ಲ, ವಿಪರೀತವಾಗಿ ಯೋಚನೆ ಮಾಡ್ತಾರೆ. ಕಾಂಗ್ರೆಸ್‌ಗೂ ವಿನಾಶ ಕಾಲ ಬಂದಿದೆ ಎಂದರು.

ಬೆಂಗಳೂರಿನಲ್ಲಿ ಸುದ್ದಿಗೊಷ್ಠಿ ನಡೆಸಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ,ಪಿಎಫ್‌ಐ ಬ್ಯಾನ್ ಮಾಡುವ ವಿಚಾರ ಕುರಿತು ಮಾತನಾಡಿದ ಅವರು ‘ ಪಿಎಫ್‌ಐ ಬಾಂಬ್ ಬ್ಲಾಸ್ಟ್ ಮಾಡಿದ್ದು, ಈಗಾಗಲೇ ಅದನ್ನ ಬ್ಯಾನ್ ಮಾಡಲಾಗಿದೆ. ಆದ್ರೆ, ಇವತ್ತು ಕಾಂಗ್ರೆಸ್ ಹೇಳ್ತಿದೆ ಪಿಎಫ್‌ಐ ಬ್ಯಾನ್ ಮಾಡ್ತೀವಿ ಅಂತ. ಆದ್ರೆ, ಅವರ ಉದ್ದೇಶ ಭಜರಂಗದಳ ಬ್ಯಾನ್ ಮಾಡಬೇಕೆಂದು. ಕಾಂಗ್ರೆಸ್ ಈ ಹಿಂದೆ ಮೂರು ಬಾರಿ ಆರ್‌ಎಸ್ಎಸ್ ಬ್ಯಾನ್ ಮಾಡಿತ್ತು. ಆದ್ರೆ, ಇವತ್ತು ಜಗತ್ತಿನ ಅತಿ ದೊಡ್ಡ ಸಂಘಟನೆ ಆರ್‌ಎಸ್ಎಸ್ ಆಗಿದೆ. ಆರ್‌ಎಸ್ಎಸ್ ನಲ್ಲಿ ವಿವಿಧ ವಿಭಾಗ ಕೆಲಸ ಮಾಡ್ತಿದೆ ಎಂದರು.

ತಾಕತ್ ಇದ್ದರೆ, ಭಜರಂಗದಳ ಬ್ಯಾನ್ ಮಾಡಿ ತೋರಿಸಿ‌ : ನಿಮಗೆ ತಾಕತ್ ಇದ್ದರೆ, ಭಜರಂಗದಳ ಬ್ಯಾನ್ ಮಾಡಿ ತೋರಿಸಿ. ಆರ್‌ಎಸ್ಎಸ್ ನ ಯುವಕರ ದಳ ಭಜರಂಗದಳ, ಇದು ದೇಶದ ಪರ ಕೆಲಸ ಮಾಡುತ್ತಿರುವ ಸಂಘಟನೆ, ದೇಶ ವಿರೋಧಿ ಸಂಘಟನೆ ಅಲ್ಲ. ಇವತ್ತು ಭಜರಂಗದಳ ಮತ್ತು ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿ ಕಾಂಗ್ರೆಸ್ ಇಟ್ಟಿದೆ. ದೇಶದ್ರೋಹಿ ಪಿಎಫ್ಐ ಜತೆ ದೇಶಪ್ರೇಮಿ ಭಜರಂಗದಳ ಹೋಲಿಸಿರೋದು ಸರಿಯಲ್ಲ. ನಿಮಗೆ ತಾಕತ್ ಇದ್ದರೆ ಭಜರಂಗದಳ ನಿಷೇಧ ಮಾಡಿ ನೋಡಿ. ಆಗ ನಾವೂ ದೇಶಾದ್ಯಂತ ತೋರಿಸ್ತೇವೆ. ಭಜರಂಗದಳದ ನಿಷೇಧವನ್ನು ಹಿಂದೂ ಸಮಾಜ ಒಪ್ಪಲ್ಲ. ಮುಸಲ್ಮಾನರ ಮುಖವಾಡ ಸಿದ್ದರಾಮಯ್ಯ ಎಂದು ನಾನು ಹಿಂದೆ ಹೇಳಿದ್ದೆ. ಅದು ಇವತ್ತು ಸಾಬೀತಾಗಿದೆ. ನಾನೂ ಭಜರಂಗದಳದ ಕಾರ್ಯಕರ್ತೆ. ತಾಕತ್ ಇದ್ರೆ ನನ್ನನ್ನೂ ಅರೆಸ್ಟ್ ಮಾಡಿ ಎಂದು ಕಾಂಗ್ರೆಸ್​ಗೆ ಶೋಭಾ ನೇರ ಸವಾಲು ಹಾಕಿದ್ದಾರೆ.

ನೀವು ಅಧಿಕಾರಕ್ಕೆ ಬಂದ್ರೆ, 10 ಸಾವಿರ ಕೋಟಿ ಮುಸ್ಲಿಮರಿಗೆ ಮೀಸಲು, ಗೋ‌ಹತ್ಯೆ ಕಾಯ್ದೆ ವಾಪಸ್, ಮತಾಂತರ ಕಾಯ್ದೆ ವಾಪಸ್ ಎಂದು ಹೇಳಿದ್ದೀರಿ. ತಾಯಿ ಎದೆ ಹಾಲು ಇಲ್ಲದಾಗ ಗೋ ಹಾಲನ್ನ ಕುಡೀತಿವಿ. ಆದ್ರೆ, ನೀವು ಗೋ ಹತ್ಯೆ ಕಾಯ್ದೆಯನ್ನೇ ತೆಗೀತೀವಿ ಅಂತ ಹೇಳ್ತೀರಿ. ಇವತ್ತು ಪಿಎಫ್‌ಐ ಇಸ್ಲಾಂ ಜೊತೆ, ಐಸಿಸ್ ಜೊತೆ ಸಂಬಂಧ ಇಟ್ಟುಕೊಂಡಿದ್ರು. ಶಿವಮೊಗ್ಗದಲ್ಲಿ ಎನ್ಐಎ ದಾಳಿ ನಡೆಸಿದಾಗ ಸಿಕ್ಕಿಬಿದ್ರು. ಅವರೆಲ್ಲರೂ ಎನ್ಐಎ ವಿಚಾರಣೆ ನಡೆಸುತ್ತಿದೆ. ಯಾರೆಲ್ಲಾ ಬಾಂಬ್ ಬ್ಲಾಸ್ಟ್ ನಲ್ಲಿ ಸಿಕ್ಕಿಬಿದ್ರು ಅವರೆಲ್ಲ ನಮ್ಮ ಅಣ್ಣ ತಮ್ಮಂದಿರು ಅಂತ ಡಿಕೆಶಿ ಹೇಳಿದ್ದಾರೆ. ಈ ಎಲ್ಲಾ ಕೃತ್ಯಗಳಿಗೆ ಸಿದ್ದರಾಮಯ್ಯ, ಡಿಕೆಶಿ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೀಗ ನಾವೆಲ್ಲರೂ ಒಟ್ಟಾಗಿ ಎದುರಿಸಬೇಕು. ನಿಮ್ಮ ಅಜ್ಜಿ, ತಾತನ ಕಾಲದಲ್ಲಿ RSS ಬ್ಯಾನ್ ಮಾಡಿದ್ರಿ, ಈಗ ಏನೂ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾವು ವಿಶ್ವದ, ದೇಶದ ಅತಿ ದೊಡ್ಡ ಸಂಘಟನೆ, ಅತಿ ದೊಡ್ಡ ಪಕ್ಷ, ನಮ್ಮ ನಾಯಕ ವಿಶ್ವದ ದೊಡ್ಡ ನಾಯಕ. ನೀವು ಕೇವಲ ಮುಸ್ಲಿಂ ಓಟಲ್ಲಿ ಗೆದ್ದು ಬನ್ನಿ, ಕಾಂಗ್ರೆಸ್‌ಗೆ ತಾಕತ್ ಇದೆಯಾ.? ಈ ಪ್ರಣಾಳಿಕೆಯಲ್ಲಿ ಕೊಟ್ಟಿರೋದು ಕೇವಲ ಒಂದು ಧರ್ಮದ ಓಲೈಕೆ ಮಾಡಲು, ಅವರನ್ನೇ ಓಲೈಕೆ ಮಾಡಿ, ಹಿಂದೂಗಳ ಓಟ್ ನಿಮಗೆ ಸಿಗೋದಿಲ್ಲ ಎಂದು ಕಿಡಿಕಾಡಿದ್ದಾರೆ.

lokesh

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

5 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

5 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

6 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

7 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

7 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

15 hours ago