BREAKING NEWS

ಕಾಂಗ್ರೆಸ್ ಪಕ್ಷ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ : ಮುಖ್ಯಮಂತ್ರಿ ಸಿದ್ದರಾಮಯ್ಯ !

ಶಿರಸಿ : ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ರವರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆಯೆ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬಾಂಬ್ ಸ್ಪೋಟ ಪ್ರಕರಣ ತನಿಖೆ ನಡೆಯುತ್ತಿದೆ. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನನಗೆ ಯಾವುದೇ ಬೆದರಿಕೆ ಬಂದಿಲ್ಲ ಎಂದರು.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದೆ. ಇದರ ಬಗ್ಗೆ ಪೊಲೀಸರು, ಸಿಸಿಬಿ ಹಾಗೂ ಎನ್ ಐ ಎಯವರು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ಸ್ಪೋಟದ ಬಗ್ಗೆ ಕೆಲವು ಸುಳಿವುಗಳು ಸಿಕ್ಕಿದ್ದು, ಎನ್ ಐ ಎ ಯವರು ಐವರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ ಎಂದರು.

ದೇಶದ್ರೋಹಿಗಳು ಯಾರು : ಪಾಕ್ ಪರ ಘೋಷಣೆ ಪ್ರಕರಣದ ಎಫ್ ಎಸ್ ಎಲ್ ವರದಿಯನ್ನು ಕಾಂಗ್ರೆಸ್ ಸರ್ಕಾರ ತಿಳಿಸುತ್ತಿಲ್ಲ ಎಂಬ ಬಿಜೆಪಿಯವರ ಟೀಕೆಗೆ ಉತ್ತರಿಸುತ್ತಾ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕ್ ಪರ ಘೋಷಣೆಗಳನ್ನು ಕೂಗಿದ್ದರು. ಆಗ ಆ ಸರ್ಕಾರ ಪ್ರಕರಣವನ್ನೇ ವಜಾಗೊಳಿಸಿದ್ದರು. ಆ ಪ್ರಕರಣಕ್ಕೆ ಸಂಬಂಧಿಸಿದವರನ್ನು ಬಂಧಿಸಲಾಗಿದೆ. ಇದರಿಂದ ಯಾರು ದೇಶದ್ರೋಹಿಗಳು ಎಂದು ತಿಳಿಯುತ್ತದೆ ಎಂದರು.

ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಶೀಘ್ರ : “ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಘೋಷಣೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ. ಪಟ್ಟಿಯನ್ನು ಆದಷ್ಟು ಬೇಗ ಪ್ರಕಟಿಸಲಾಗುವುದು ಎಂದರು.

ಅನಂತಕುಮಾರ್ ಹೆಗಡೆಯವರಿಗೆ ಸಂಸ್ಕೃತಿ ಇಲ್ಲ : ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ ಅವರು ಮುಖ್ಯಮಂತ್ರಿಗಳನ್ನು ಅಗೌರವದಿಂದ ಮಾತನಾಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಹಾಗೂ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿರುವವರು ಈ ರೀತಿ ಮಾತನಾಡುವುದಿಲ್ಲ. ಜನವಿರೋಧಿಯಾಗಿರುವವರು ಮಾತ್ರ ಈ ರೀತಿ ಮಾತನಾಡುತ್ತಾರೆ. ಅವರಿಗೆ ಸಂಸ್ಕೃತಿ ಇಲ್ಲ. ಅವರು ಮನುವಾದಿ ಹಾಗೂ ಹಿಂದುತ್ವವಾದಿ. ಕೇವಲ ಕಳೆದ 2-3 ತಿಂಗಳಿನಿಂದ ಚುರುಕಾಗಿದ್ದು, ಅವರು ಇಷ್ಟು ದಿನ ಎಲ್ಲಿದ್ದರು ಎಂದು ಪ್ರಶ್ನಿಸಿದರು.

ಜಿಲ್ಲೆಗೆ ಮಲ್ಪಿಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆಯಿದ್ದು, ಈ ಬಗ್ಗೆ ಆಯವ್ಯಯದಲ್ಲಿ ಪ್ರಸ್ತಾಪವಿಲ್ಲದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು

andolana

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

3 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

3 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

3 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

4 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

4 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

5 hours ago