ಶಿರಸಿ : ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ರವರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆಯೆ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬಾಂಬ್ ಸ್ಪೋಟ ಪ್ರಕರಣ ತನಿಖೆ ನಡೆಯುತ್ತಿದೆ. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನನಗೆ ಯಾವುದೇ ಬೆದರಿಕೆ ಬಂದಿಲ್ಲ ಎಂದರು.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದೆ. ಇದರ ಬಗ್ಗೆ ಪೊಲೀಸರು, ಸಿಸಿಬಿ ಹಾಗೂ ಎನ್ ಐ ಎಯವರು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ಸ್ಪೋಟದ ಬಗ್ಗೆ ಕೆಲವು ಸುಳಿವುಗಳು ಸಿಕ್ಕಿದ್ದು, ಎನ್ ಐ ಎ ಯವರು ಐವರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ ಎಂದರು.
ದೇಶದ್ರೋಹಿಗಳು ಯಾರು : ಪಾಕ್ ಪರ ಘೋಷಣೆ ಪ್ರಕರಣದ ಎಫ್ ಎಸ್ ಎಲ್ ವರದಿಯನ್ನು ಕಾಂಗ್ರೆಸ್ ಸರ್ಕಾರ ತಿಳಿಸುತ್ತಿಲ್ಲ ಎಂಬ ಬಿಜೆಪಿಯವರ ಟೀಕೆಗೆ ಉತ್ತರಿಸುತ್ತಾ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕ್ ಪರ ಘೋಷಣೆಗಳನ್ನು ಕೂಗಿದ್ದರು. ಆಗ ಆ ಸರ್ಕಾರ ಪ್ರಕರಣವನ್ನೇ ವಜಾಗೊಳಿಸಿದ್ದರು. ಆ ಪ್ರಕರಣಕ್ಕೆ ಸಂಬಂಧಿಸಿದವರನ್ನು ಬಂಧಿಸಲಾಗಿದೆ. ಇದರಿಂದ ಯಾರು ದೇಶದ್ರೋಹಿಗಳು ಎಂದು ತಿಳಿಯುತ್ತದೆ ಎಂದರು.
ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಶೀಘ್ರ : “ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಘೋಷಣೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ. ಪಟ್ಟಿಯನ್ನು ಆದಷ್ಟು ಬೇಗ ಪ್ರಕಟಿಸಲಾಗುವುದು ಎಂದರು.
ಅನಂತಕುಮಾರ್ ಹೆಗಡೆಯವರಿಗೆ ಸಂಸ್ಕೃತಿ ಇಲ್ಲ : ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ ಅವರು ಮುಖ್ಯಮಂತ್ರಿಗಳನ್ನು ಅಗೌರವದಿಂದ ಮಾತನಾಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಹಾಗೂ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿರುವವರು ಈ ರೀತಿ ಮಾತನಾಡುವುದಿಲ್ಲ. ಜನವಿರೋಧಿಯಾಗಿರುವವರು ಮಾತ್ರ ಈ ರೀತಿ ಮಾತನಾಡುತ್ತಾರೆ. ಅವರಿಗೆ ಸಂಸ್ಕೃತಿ ಇಲ್ಲ. ಅವರು ಮನುವಾದಿ ಹಾಗೂ ಹಿಂದುತ್ವವಾದಿ. ಕೇವಲ ಕಳೆದ 2-3 ತಿಂಗಳಿನಿಂದ ಚುರುಕಾಗಿದ್ದು, ಅವರು ಇಷ್ಟು ದಿನ ಎಲ್ಲಿದ್ದರು ಎಂದು ಪ್ರಶ್ನಿಸಿದರು.
ಜಿಲ್ಲೆಗೆ ಮಲ್ಪಿಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆಯಿದ್ದು, ಈ ಬಗ್ಗೆ ಆಯವ್ಯಯದಲ್ಲಿ ಪ್ರಸ್ತಾಪವಿಲ್ಲದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…