BREAKING NEWS

ಕಾಂಗ್ರೆಸ್ ಪಕ್ಷ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ : ಮುಖ್ಯಮಂತ್ರಿ ಸಿದ್ದರಾಮಯ್ಯ !

ಶಿರಸಿ : ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ರವರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆಯೆ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬಾಂಬ್ ಸ್ಪೋಟ ಪ್ರಕರಣ ತನಿಖೆ ನಡೆಯುತ್ತಿದೆ. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನನಗೆ ಯಾವುದೇ ಬೆದರಿಕೆ ಬಂದಿಲ್ಲ ಎಂದರು.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದೆ. ಇದರ ಬಗ್ಗೆ ಪೊಲೀಸರು, ಸಿಸಿಬಿ ಹಾಗೂ ಎನ್ ಐ ಎಯವರು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ಸ್ಪೋಟದ ಬಗ್ಗೆ ಕೆಲವು ಸುಳಿವುಗಳು ಸಿಕ್ಕಿದ್ದು, ಎನ್ ಐ ಎ ಯವರು ಐವರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ ಎಂದರು.

ದೇಶದ್ರೋಹಿಗಳು ಯಾರು : ಪಾಕ್ ಪರ ಘೋಷಣೆ ಪ್ರಕರಣದ ಎಫ್ ಎಸ್ ಎಲ್ ವರದಿಯನ್ನು ಕಾಂಗ್ರೆಸ್ ಸರ್ಕಾರ ತಿಳಿಸುತ್ತಿಲ್ಲ ಎಂಬ ಬಿಜೆಪಿಯವರ ಟೀಕೆಗೆ ಉತ್ತರಿಸುತ್ತಾ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕ್ ಪರ ಘೋಷಣೆಗಳನ್ನು ಕೂಗಿದ್ದರು. ಆಗ ಆ ಸರ್ಕಾರ ಪ್ರಕರಣವನ್ನೇ ವಜಾಗೊಳಿಸಿದ್ದರು. ಆ ಪ್ರಕರಣಕ್ಕೆ ಸಂಬಂಧಿಸಿದವರನ್ನು ಬಂಧಿಸಲಾಗಿದೆ. ಇದರಿಂದ ಯಾರು ದೇಶದ್ರೋಹಿಗಳು ಎಂದು ತಿಳಿಯುತ್ತದೆ ಎಂದರು.

ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಶೀಘ್ರ : “ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಘೋಷಣೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ. ಪಟ್ಟಿಯನ್ನು ಆದಷ್ಟು ಬೇಗ ಪ್ರಕಟಿಸಲಾಗುವುದು ಎಂದರು.

ಅನಂತಕುಮಾರ್ ಹೆಗಡೆಯವರಿಗೆ ಸಂಸ್ಕೃತಿ ಇಲ್ಲ : ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ ಅವರು ಮುಖ್ಯಮಂತ್ರಿಗಳನ್ನು ಅಗೌರವದಿಂದ ಮಾತನಾಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಹಾಗೂ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿರುವವರು ಈ ರೀತಿ ಮಾತನಾಡುವುದಿಲ್ಲ. ಜನವಿರೋಧಿಯಾಗಿರುವವರು ಮಾತ್ರ ಈ ರೀತಿ ಮಾತನಾಡುತ್ತಾರೆ. ಅವರಿಗೆ ಸಂಸ್ಕೃತಿ ಇಲ್ಲ. ಅವರು ಮನುವಾದಿ ಹಾಗೂ ಹಿಂದುತ್ವವಾದಿ. ಕೇವಲ ಕಳೆದ 2-3 ತಿಂಗಳಿನಿಂದ ಚುರುಕಾಗಿದ್ದು, ಅವರು ಇಷ್ಟು ದಿನ ಎಲ್ಲಿದ್ದರು ಎಂದು ಪ್ರಶ್ನಿಸಿದರು.

ಜಿಲ್ಲೆಗೆ ಮಲ್ಪಿಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆಯಿದ್ದು, ಈ ಬಗ್ಗೆ ಆಯವ್ಯಯದಲ್ಲಿ ಪ್ರಸ್ತಾಪವಿಲ್ಲದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು

andolana

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

19 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

3 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

19 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

19 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

21 hours ago