BREAKING NEWS

ಮಾತು ಕೇಳದಿದ್ದರೇ ಮುಂದಿನ ನಡೆ ತೆಗೆದುಕೊಳ್ಳುತ್ತೇವೆ: ಸಿಎಂ ಇಬ್ರಾಹಿಂ

ಬೆಂಗಳೂರು : ನಮ್ಮ ಮಾತನ್ನು ಕೇಳದಿದ್ದರೇ ನಾವು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಜೆಡಿಎಸ್‌ ಪಕ್ಷದ ವರಿಷ್ಠ ಹೆಚ್‌ಡಿ ದೇವೇಗೌಡ ಅವರಿಗೆ ಸಿಎಂ ಇಬ್ರಾಹಿಂ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಜೊತೆಗೆ ಮೈತ್ರಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್​ 11ರ ಬಳಿಕ ನಾವು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ರಾಜ್ಯದಲ್ಲಿ ನಮಗೆ ಮೂರನೇ ಶಕ್ತಿಯಾಗಿ ಬೆಳೆಯಲು ಅವಕಾಶವಿದೆ ಎಂದರು.

ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರಿಗೆ ಮತ್ತೊಮ್ಮೆ ಹೇಳುತ್ತೇನೆ. ನಮ್ಮ ಮಾತನ್ನು ಕೇಳದಿದ್ದರೆ ನಾವು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ.
ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ​ ನೋಡಿ ಬೇಸರವಾಯ್ತು. ಕುಮಾರಸ್ವಾಮಿ ಅವರೇ ಮೊದಲು ನಿಮ್ಮ ಆರೋಗ್ಯ ನೋಡಿಕೊಳ್ಳಿ. ದೇವೇಗೌಡ ಅವರು ಒತ್ತಡಕ್ಕೆ ಒಳಗಾಗಿದ್ದಾರೆ, ಸ್ವಂತ ನಿರ್ಧಾರ ತೆಗೆದುಕೊಂಡಿಲ್ಲ.

ಎಲ್ಲಾ ಶಾಸಕರು ಜಾತ್ಯತೀತ ಸಿದ್ಧಾಂತದಲ್ಲೇ ಗೆದ್ದು ಬಂದಿರುವುದು. ಈಗಾಗಲೇ ಜೆಡಿಎಸ್‌ನ​ ಐವರು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಇದು ದೇವೇಗೌಡ, ಕುಮಾರಸ್ವಾಮಿ ಆರೋಗ್ಯದ ಮೇಲೆ ಪರಿಣಾಮ ಬೀರಬಾರದು. ಹೀಗಾಗಿ ಸಮಾಧಾನದಿಂದ ಅವರಿಗೆ ಸಂದೇಶ ಮುಟ್ಟಿಸುತ್ತಿದ್ದೇನೆ ಎಂದು ತಿಳಿಸಿದರು.

andolanait

Recent Posts

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…

28 mins ago

ರಸ್ತೆಗಳು ಗುಂಡಿಮಯ….ಜನರಿಗೆ ಜೀವ ಭಯ!

ಪ್ರಶಾಂತ್‌ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…

38 mins ago

ವಿದ್ಯುತ್‌ ಬಿಲ್‌ ಬಾಕಿ ; 3 ಗ್ರಾಪಂಗಳಿಗೆ ಸೆಸ್ಕ್‌ ಶಾಕ್‌

ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು…

51 mins ago

ಮಹಾಪಂಚ್‌ ಕಾರ್ಟೂನ್‌

ಮಹಪಂಚ್‌ ಕಾರ್ಟೂನ್‌ | ಏ.17 ಶುಕ್ರವಾರ

3 hours ago

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

14 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

14 hours ago