BREAKING NEWS

ಮಾತು ಕೇಳದಿದ್ದರೇ ಮುಂದಿನ ನಡೆ ತೆಗೆದುಕೊಳ್ಳುತ್ತೇವೆ: ಸಿಎಂ ಇಬ್ರಾಹಿಂ

ಬೆಂಗಳೂರು : ನಮ್ಮ ಮಾತನ್ನು ಕೇಳದಿದ್ದರೇ ನಾವು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಜೆಡಿಎಸ್‌ ಪಕ್ಷದ ವರಿಷ್ಠ ಹೆಚ್‌ಡಿ ದೇವೇಗೌಡ ಅವರಿಗೆ ಸಿಎಂ ಇಬ್ರಾಹಿಂ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಜೊತೆಗೆ ಮೈತ್ರಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್​ 11ರ ಬಳಿಕ ನಾವು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ರಾಜ್ಯದಲ್ಲಿ ನಮಗೆ ಮೂರನೇ ಶಕ್ತಿಯಾಗಿ ಬೆಳೆಯಲು ಅವಕಾಶವಿದೆ ಎಂದರು.

ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರಿಗೆ ಮತ್ತೊಮ್ಮೆ ಹೇಳುತ್ತೇನೆ. ನಮ್ಮ ಮಾತನ್ನು ಕೇಳದಿದ್ದರೆ ನಾವು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ.
ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ​ ನೋಡಿ ಬೇಸರವಾಯ್ತು. ಕುಮಾರಸ್ವಾಮಿ ಅವರೇ ಮೊದಲು ನಿಮ್ಮ ಆರೋಗ್ಯ ನೋಡಿಕೊಳ್ಳಿ. ದೇವೇಗೌಡ ಅವರು ಒತ್ತಡಕ್ಕೆ ಒಳಗಾಗಿದ್ದಾರೆ, ಸ್ವಂತ ನಿರ್ಧಾರ ತೆಗೆದುಕೊಂಡಿಲ್ಲ.

ಎಲ್ಲಾ ಶಾಸಕರು ಜಾತ್ಯತೀತ ಸಿದ್ಧಾಂತದಲ್ಲೇ ಗೆದ್ದು ಬಂದಿರುವುದು. ಈಗಾಗಲೇ ಜೆಡಿಎಸ್‌ನ​ ಐವರು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಇದು ದೇವೇಗೌಡ, ಕುಮಾರಸ್ವಾಮಿ ಆರೋಗ್ಯದ ಮೇಲೆ ಪರಿಣಾಮ ಬೀರಬಾರದು. ಹೀಗಾಗಿ ಸಮಾಧಾನದಿಂದ ಅವರಿಗೆ ಸಂದೇಶ ಮುಟ್ಟಿಸುತ್ತಿದ್ದೇನೆ ಎಂದು ತಿಳಿಸಿದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago