BREAKING NEWS

ನಾವು ಕಾವೇರಿಗಾಗಿ ಬಂದ್‌ಗೆ ಕರೆ ನೀಡಿದರೆ ಸರ್ಕಾರ ನಮ್ಮ ಪ್ರತಿಭಟನೆಯನ್ನು ಬಂದ್‌ ಮಾಡುತ್ತಿದೆ : ವಾಟಾಳ್‌ ಆಕ್ರೋಶ

ಬೆಂಗಳೂರು : ಕಾವೇರಿಗಾಗಿ ನಾವು ಕರ್ನಾಟಕ ಬಂದ್‌ಗೆ ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್‌ ಮಾಡಲು ಹೊರಟಿದೆ ಎಂದು ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಾಲರ್ಸ್‌ ಕಾಲೋನಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಎರಡು ಬಂದ್‌ ನಡೆಯುತ್ತಿದೆ. ನಾವು ಕಾವೇರಿಗಾಗಿ ಬಂದ್‌ಗೆ ಕರೆ ನೀಡಿದರೆ ಸರ್ಕಾರ ನಮ್ಮ ಪ್ರತಿಭಟನೆಯನ್ನು ಬಂದ್‌ ಮಾಡುತ್ತಿದೆ. ಸರ್ಕಾರ ಕಾವೇರಿ ಸಮಸ್ಯೆಯನ್ನು ಅರ್ಥಮಾಡಿಕೊಂಡಿಲ್ಲ ಎಂದು ಸಿಟ್ಟು ಹೊರಹಾಕಿದರು.

ಬಂದ್‌ಗೆ ಬೆಂಬಲ ನೀಡಿದ ಜನತೆಗೆ ಧನ್ಯವಾದ ಹೇಳಿದ ವಾಟಾಳ್‌, ಅಖಂಡ ಕರ್ನಾಟಕ ಹೆಸರನ್ನು ಕನ್ನಡಿಗರು ಉಳಿಸಿದ್ದಾರೆ. ದೇಶಕ್ಕೆ ಕನ್ನಡಿಗರ ಶಕ್ತಿ ಪ್ರದರ್ಶನವಾಗಿದೆ ಎಂದು ಹೇಳಿದರು.

ಇಂದು ವಾಟಾಳ್‌ ನಾಗರಾಜ್‌ ಬುರ್ಖಾ ಧರಿಸಿ ತಲೆಯ ಮೇಲೆ ನೀರಿನ ಖಾಲಿ ಕೊಡ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

lokesh

Recent Posts

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

5 mins ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

31 mins ago

ನಂದಿನ ರಾಯಭಾರಿಯಾಗಿ ಸುಧಾರಾಣಿ

ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…

36 mins ago

ನಾಳೆ ಭಾರತ ಬಂದ್‌ : ಶಾಲಾ, ಕಾಲೇಜು ಬಂದ್? ಏನಿರುತ್ತೇ, ಏನಿರಲ್ಲ?

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ.…

54 mins ago

ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ ; ವಂದೇ ಮಾತರಂಗೂ ಶಿಷ್ಟಾಚಾರ ಗೌರವ!

ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…

1 hour ago

ವಿದ್ಯಾರ್ಥಿಗಳು ಹೊಸ ಹೊಸ ವಿಷಯಗಳ ಕಡೆ ಗಮನಹರಿಸಿ : ಕುಲಪತಿ ಲೋಕನಾಥ್‌ ಸಲಹೆ

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…

2 hours ago