BREAKING NEWS

ನಾವು ಕಾವೇರಿಗಾಗಿ ಬಂದ್‌ಗೆ ಕರೆ ನೀಡಿದರೆ ಸರ್ಕಾರ ನಮ್ಮ ಪ್ರತಿಭಟನೆಯನ್ನು ಬಂದ್‌ ಮಾಡುತ್ತಿದೆ : ವಾಟಾಳ್‌ ಆಕ್ರೋಶ

ಬೆಂಗಳೂರು : ಕಾವೇರಿಗಾಗಿ ನಾವು ಕರ್ನಾಟಕ ಬಂದ್‌ಗೆ ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್‌ ಮಾಡಲು ಹೊರಟಿದೆ ಎಂದು ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಾಲರ್ಸ್‌ ಕಾಲೋನಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಎರಡು ಬಂದ್‌ ನಡೆಯುತ್ತಿದೆ. ನಾವು ಕಾವೇರಿಗಾಗಿ ಬಂದ್‌ಗೆ ಕರೆ ನೀಡಿದರೆ ಸರ್ಕಾರ ನಮ್ಮ ಪ್ರತಿಭಟನೆಯನ್ನು ಬಂದ್‌ ಮಾಡುತ್ತಿದೆ. ಸರ್ಕಾರ ಕಾವೇರಿ ಸಮಸ್ಯೆಯನ್ನು ಅರ್ಥಮಾಡಿಕೊಂಡಿಲ್ಲ ಎಂದು ಸಿಟ್ಟು ಹೊರಹಾಕಿದರು.

ಬಂದ್‌ಗೆ ಬೆಂಬಲ ನೀಡಿದ ಜನತೆಗೆ ಧನ್ಯವಾದ ಹೇಳಿದ ವಾಟಾಳ್‌, ಅಖಂಡ ಕರ್ನಾಟಕ ಹೆಸರನ್ನು ಕನ್ನಡಿಗರು ಉಳಿಸಿದ್ದಾರೆ. ದೇಶಕ್ಕೆ ಕನ್ನಡಿಗರ ಶಕ್ತಿ ಪ್ರದರ್ಶನವಾಗಿದೆ ಎಂದು ಹೇಳಿದರು.

ಇಂದು ವಾಟಾಳ್‌ ನಾಗರಾಜ್‌ ಬುರ್ಖಾ ಧರಿಸಿ ತಲೆಯ ಮೇಲೆ ನೀರಿನ ಖಾಲಿ ಕೊಡ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

lokesh

Recent Posts

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…

2 mins ago

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ಆಕಾಂಕ್ಷಿಗಳ ಕಸರತ್ತು

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …

7 mins ago

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

11 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

11 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

11 hours ago