BREAKING NEWS

ನಮ್ಮ ಬಳಿ ನೈಸ್‌ ಸಂಸ್ಥೆ ಜಮೀನಿದ್ದರೆ, ಇಡೀ ಕುಟುಂಬವೇ ರಾಜಕೀಯ ನಿವೃತ್ತಿ ಹೊಂದುತ್ತೇವೆ: ಎಚ್‌ಡಿಕೆ

ಬೆಂಗಳೂರು : ನಮ್ಮ ಕುಟುಂಬದ ಯಾವುದೇ ವ್ಯಕ್ತಿ ಹೆಸರಿನಲ್ಲಿ ನೈಸ್ ಸಂಸ್ಥೆಯ ಜಮೀನಿದ್ದರೆ ನಮ್ಮ ಇಡೀ ಕುಟುಂಬ ರಾಜಕೀಯ ನಿವೃತ್ತಿ ಹೊಂದುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬದವರ ಹೆಸರಿನಲ್ಲಿ ನೈಸ್ ಸಂಸ್ಥೆಗೆ ಸೇರಿದ ಯಾವುದೇ ಆಸ್ತಿ ಇಲ್ಲ ಎಂದರು.

ಸಂಸದ ಡಿ.ಕೆ. ಸುರೇಶ್ ವಿರುದ್ಧ ಪರೋಕ್ಷವಾಗಿ ತೀವ್ರ ವಾಗ್ದಾಳಿ ನಡೆಸಿದ ಅವರು, ನೈಸ್ ಸಂಸ್ಥೆ ಮಾಲೀಕರ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ. ಇವರು ನೈಸ್ ನೈಸ್ ಸಂಸ್ಥೆಯ ಜಮೀನು ಕಬಳಿಸಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸಹಿ ಹಾಕಿದ್ದರೆ ಎಂದು ಪ್ರಶ್ನಿಸಿದರು.

ಬೆಂಗಳೂರು- ಮೈಸೂರು ನಡುವೆ ಎಕ್ಸ್‍ಪ್ರೆಸ್ ಹೈವೇ ನಿರ್ಮಾಣ ಮಾಡುವ ಯೋಜನೆಗೆ ದೇವೇಗೌಡರು ಸಹಿ ಹಾಕಿದ್ದರು. ಆ ನೈಸ್ ರಸ್ತೆ ಹೆಸರಿನಲ್ಲಿ ಆ ಸಂಸ್ಥೆ ಜೊತೆ ಶಾಮೀಲಾಗಿ ರೈತರ ಜಮೀನು ಹೊಡೆಯುವ ಉದ್ದೇಶದಂದಲ್ಲ ಎಂದು ಸ್ಪಷ್ಟಪಡಿಸಿದರು.

ನೈಸ್ ಕಂಪೆನಿ ಜೊತೆ ವ್ಯವಹಾರ ಮಾಡಿರುವ ಸಣ್ಣ ಸಾಕ್ಷಿ ಇದ್ದರೂ ಕೊಡಿ. ನಿವೃತ್ತಿ ಹೊಂದುತ್ತೇವೆ. 25 ವರ್ಷ ಕಳೆದರೂ ರಸ್ತೆ ಮಾಡಲಿಲ್ಲ. ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುವ ವ್ಯಕ್ತಿಗೆ ಕೇಳುತ್ತೇನೆ. ನಿಮ್ಮ ಅಣ್ಣ ನಗರಾಭಿವೃದ್ಧಿ ಸಚಿವರಾಗಿದ್ದಾಗ ಬಿಎಂಐಸಿ ಯೋಜನೆಯ ಮೂಲ ಒಪ್ಪಂದ ಏನಿತ್ತು. ಸುಪ್ರೀಕೋರ್ಟ್, ಹೈಕೋರ್ಟ್‍ನ ನಿರ್ದೇಶನಗಳು ಏನಿದ್ದವು ಎಂದು ಪ್ರಶ್ನಿಸಿದರು.

2000 ಎಕರೆ ಜಮೀನು ಯಾರ ಹೆಸರಿಗೆ ಮಾಡಿಕೊಳ್ಳಲು ಹೊರಟಿದ್ದೀರಾ, ನಿಮ್ಮ ಕುಟುಂಬದ ಅವರ ಹೆಸರಿಗೆ ಮಾಡಿಕೊಳ್ಳಲು ಹೊರಟಿದ್ದೀರಾ. ವ್ಯವಹಾರ ನಡೆಸುತ್ತಿರುವವರು ನೀವು ಎಂದು ಆಕ್ರೋಶ ಪರಿಕರಾಗಿ ಆರೋಪಿಸಿದರು.

ತಮಿಳು ನಾಡಿಗೆ ನಾನು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲೂ ಕಾವೇರಿ ನೀರು ಬಿಡಲಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಕಾವೇರಿ ನದಿ ಪಾತ್ರದ ಜಲಾಶಯಗಳಲ್ಲಿ ಎತ್ತೇಚ್ಚವಾಗಿ ನೀರು ಬಿದ್ದಾಗ ತಮಿಳು ನಾಡಿಗೆ ನೀರು ಹರಿಸಲಾಗಿದೆ. ದೇವೇಗೌಡರು ಕೂಡ ನೀರು ಹರಿಸಿದ್ದು, ನ್ಯಾಯಾಲಯದ ನಿರ್ದೇಶನ ಕೊಟ್ಟಾಗ ಎಂದು ಸ್ಪಷ್ಟ ನೀಡಿದರು.

ದೇವೇಗೌಡರು ಎಂದೂ ಕೂಡ ರಾಜ್ಯದ ರೈತರ ಹಿತಾಸಕ್ತಿ ಕಡೆಗಣಿಸಿ ಈ ತಮಿಳುನಾಡಿಗೆ ನೀರು ಹರಿಸಿಲ್ಲ. ಅವರ ಬಗ್ಗೆ ಮಾತನಾಡಲು ಯಾರಿಗೂ ನೈತಿಕತೆ ಇಲ್ಲ. ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದು ಏನಾಯಿತು. ಚಿಕ್ಕನ್‍ಲೆಗ್ ತಿಂದು ಎಂದು ಹೋರಾಟ ಮಾಡಿದ್ದಷ್ಟೇ. ನಿಮ್ಮ ಸ್ನೇಹಿತರೇ ಅಲ್ಲವೇ ತಮಿಳು ನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಕೊಟ್ಟು ತೆಗೆದುಕೊಳ್ಳುವ ಸಂಬಂಧ ಮಾಡುತ್ತಿದ್ದೀರಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ನಮ್ಮ ರೈತರು ಇನ್ನು ಒಂದು ಬೆಳೆ ಬೆಳೆದಿಲ್ಲ. ತಮಿಳು ನಾಡಿಗೆ ನೀರು ಹರಿಸುತ್ತಿದ್ದೀರಿ. ನಮ್ಮ ರೈತರ ಮೇಲೆ ಔದರ್ಯವೇ ಇಲ್ಲ. ಈ ಕೆಲಸ ಮಾಡಲು ನೀವು ಪೆನ್ನು ಕೊಡಿ ಎಂದು ಕೇಳಿದ್ದು, ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಓಲೈಕೆ ಮಾಡುತ್ತಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ಸುಪ್ರೀಂಕೋರ್ಟ್‍ನ ಮುಂದೆ ಮತ್ತೊಂದು ಅರ್ಜಿ ಹಾಕುತ್ತಾರೆ. ಹಾಗಾಗಿ ಇವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಸ್ಟಾಲಿನ್ ಅವರಿಗೆ ರೆಡ್ ಕಾರ್ಪೆಟ್ ಹಾಕಿ ಸ್ವಾಗತ ಮಾಡಿದ್ದೀರಿ ಎಂದು ಟೀಕಾ ಪ್ರಹರ ಮಾಡಿದರು. 2016-17ರಲ್ಲಿ ಗಾಂ ನಗರ ಮತ್ತು ಮಲ್ಲೇಶ್ವರಂ ನಲ್ಲಿ ಜಾಬ್‍ಕೋಡ್ ಬಗ್ಗೆ ನೀಡಿದ ತನಿಖಾ ವರದಿ ಎಲ್ಲಿದೆ ಎಂದ ಅವರು, ಈಗ ತನಿಖೆ ನಡೆಸಲು ನ್ಯಾಯಮೂರ್ತಿ ನಾಗ್‍ಮೋಹನ್ ದಾಸ್ ಅವರಿಗೆ ಕೊಟ್ಟಿದ್ದಾರೆ. ಇದು ಸಮಯ ಕಳೆಯಲು ಮಾಡುತ್ತಿರುವ ಕೆಲಸ ಎಂದು ಆರೋಪಿಸಿದರು.

ಗುತ್ತಿಗೆದಾರರಿಗೆ ಬೆದರಿಕೆ ಹಾಕಿದ್ದಂತೆ ನನಗೆ ಬೆದರಿಕೆ ಹಾಕಲು ಆಗುವುದಿಲ್ಲ ಎಂದರು.

ಸನ್ಮಾನಿಸಲಿ:
ಆಪರೇಷನ್ ಹಸ್ತದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದವರು ಹೋಗುವುದಿದ್ದರೆ ಮೈಸೂರು ಪೇಟಾ ಧರಿಸಿ ಶಾಲು ಹೊದಿಸಿ ಅವರ ಪಕ್ಷಕ್ಕೆ ಕರೆದುಕೊಳ್ಳಲಿ. ಅವರನ್ನು ತಡೆದಿರುವವರು ಯಾರು ಎಂದು ಪ್ರಶ್ನಿಸಿದರು.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

43 mins ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

1 hour ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

3 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

3 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

3 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

11 hours ago