ನವದೆಹಲಿ: ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ 2023ನೇ ಸಾಲಿನ ನ್ಯಾಷನಲ್ ರ್ಯಾಂಕಿಂಗ್ ಫ್ರೇಮ್ವರ್ಕ್ (ಎನ್ಐಆರ್ಎಫ್) ಶ್ರೇಯಾಂಕ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್(ಐಐಎಸ್ಸಿ) ದೇಶದ ನಂಬರ್ 1 ಶಿಕ್ಷಣ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.
ಅಲ್ಲದೇ, ಎಲ್ಲ ವಿಭಾಗಗಳ ಶ್ರೇಯಾಂಕದಲ್ಲಿ 2ನೇ ಸ್ಥಾನದಲ್ಲಿದೆ. ಇಂದು ದೆಹಲಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಪಟ್ಟಿ ಬಿಡುಗಡೆ ಮಾಡಿದ ಕೇಂದ್ರ ಶಿಕ್ಷಣ ಮತ್ತು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಡಾ. ರಾಜ್ಕುಮಾರ್ ರಂಜನ್ ಸಿಂಗ್ ಅವರು ಈ ಮಾಹಿತಿ ಹಂಚಿಕೊಂಡರು. ನ್ಯಾಷನಲ್ ರ್ಯಾಂಕಿಂಗ್ ಫ್ರೇಮ್ವರ್ಕ್ (ಎನ್ಐಆರ್ಎಫ್) ಶ್ರೇಯಾಂಕದಲ್ಲಿ ತಮಿಳುನಾಡಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ದೇಶದಲ್ಲಿಯೇ ಮೊದಲ ಸ್ಥಾನವನ್ನು ಉಳಿಸಿಕೊಂಡಿದೆ.
ಟಾಪ್ ಯೂನಿವರ್ಸಿಟಿ ಶ್ರೇಯಾಂಕ: ಎನ್ಐಆರ್ಎಫ್ ಶ್ರೇಯಾಂಕದ ದೇಶದ ಟಾಪ್ 10 ಯೂನಿವರ್ಸಿಟಿಗಳಲ್ಲಿ ಬೆಂಗಳೂರಿನ ಇಂಡಿಯನ್ಸ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಶಿಕ್ಷಣ ಸಂಸ್ಥೆ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲಯ ಎರಡನೇ, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಮೂರನೇ ಸ್ಥಾನದಲ್ಲಿದೆ. ಹೈದರಾಬಾದ್ ವಿವಿಗೆ ಕೊನೆಯ ಸ್ಥಾನ ಸಿಕ್ಕಿದೆ.
ಒಟ್ಟಾರೆ ವಿಭಾಗದ ಶ್ರೇಯಾಂಕ: ದೇಶದ ಎಲ್ಲ ಶಿಕ್ಷಣ ಸಂಸ್ಥೆಗಳ ಗುಣಮಟ್ಟ, ಸೌಲಭ್ಯಗಳ ಪಟ್ಟಿಯಲ್ಲಿ ತಮಿಳುನಾಡಿನ ಐಐಎಸ್ಸಿ ಮೊದಲ ಸ್ಥಾನವನ್ನು ಉಳಿಸಿಕೊಂಡಿದೆ. ಇದು ಕಳೆದ ಬಾರಿಯೂ ಅಗ್ರಸ್ಥಾನದಲ್ಲಿತ್ತು. ಬೆಂಗಳೂರಿನ ಐಐಎಸ್ಸಿ ಇದರಲ್ಲಿ 2 ನೇ ಸ್ಥಾನದಲ್ಲಿದ್ದರೆ, ದೆಹಲಿ ಐಐಎಸ್ಸಿ ಮೂರನೇ ಶ್ರೇಯ ಪಡೆದಿದೆ. ದೆಹಲಿಯ ಇನ್ನೊಂದು ಶಿಕ್ಷಣ ಸಂಸ್ಥೆಯಾದ ಜವಾಹರ್ಲಾಲ್ ನೆಹರೂ ವಿವಿ ಕೊನೆಯ ಶ್ರೇಯಾಂಕದಲ್ಲಿದೆ.
ಟಾಪ್ ಎಂಜಿನಿಯರಿಂಗ್ ಸಂಸ್ಥೆ: ದೇಶದ ಟಾಪ್ 10 ಉತ್ತಮ ಎಂಜಿನಿಯರಿಂಗ್ ಸಂಸ್ಥೆಗಳ ಶ್ರೇಯಾಂಕ ಪಟ್ಟಿಯಲ್ಲಿ ತಮಿಳುನಾಡಿನ ಮದ್ರಾಸ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮೊದಲ ಸ್ಥಾನ ಗಳಿಸಿದೆ. ದೆಹಲಿ ಐಐಟಿ, ಬಾಂಬೆ ಐಐಟಿ ನಂತರದ ಸ್ಥಾನಗಳಲ್ಲಿವೆ. ಪಶ್ಚಿಮಬಂಗಾಳದ ಜಾದವ್ಪುರ ವಿವಿ ಕೊನೆಯಲ್ಲಿದೆ. 2023 ನೇ ಸಾಲಿನ ಎನ್ಐಆರ್ಎಫ್ ಶ್ರೇಯಾಂಕ ಪಟ್ಟಿಯು nirfindia.org ನಲ್ಲಿ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಿದೆ.
ಡಾ.ರಾಧಾಕೃಷ್ಣನ್ ಸಮಿತಿಯನ್ನು ಶಿಕ್ಷಣ ಸಚಿವಾಲಯವು ಮೌಲ್ಯಮಾಪನದ ಮಾನ್ಯತೆ ನಿಯತಾಂಕಗಳನ್ನು ಪರಿಶೀಲಿಸಲು ಸ್ಥಾಪಿಸಿತ್ತು. ಎಲ್ಲಾ ಶಿಕ್ಷಣ ಸಂಸ್ಥೆಗಳ ಡೇಟಾ ಬೆರಳ ತುದಿಯಲ್ಲಿ ಲಭ್ಯವಿರುತ್ತದೆ. ಒಂದು ರಾಷ್ಟ್ರ ಒಂದು ದತ್ತಾಂಶ ನಡೆಯುತ್ತಿದೆ ಎಂದು ನ್ಯಾಷನಲ್ ಅಸೆಸ್ಮೆಂಟ್ ಅಂಡ್ ಅಕ್ರೆಡಿಟೇಶನ್ ಕೌನ್ಸಿಲ್ ಎಜುಕೇಶನಲ್ (NAAC) ನ ಅಧ್ಯಕ್ಷರಾದ ಅನಿಲ್ ಸಹಸ್ರಬುದ್ಧೆ ಹೇಳಿದ್ದಾರೆ.
ಎನ್ಐಆರ್ಎಫ್ ಅನ್ನು ನಾಲ್ಕು ವಿಭಾಗಗಳಲ್ಲಿ ವಿಂಗಡಿಸಲಾಗಿದೆ. ಉನ್ನತ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವುದು ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುವುದು ಇದರ ಉದ್ದೇಶವಾಗಿತ್ತು. 8 ನೇ ಆವೃತ್ತಿಯೊಂದಿಗೆ ನಾವು ಈಗ 8 ವಿಷಯ- ನಿರ್ದಿಷ್ಟ ಶ್ರೇಯಾಂಕಗಳನ್ನು ಒಳಗೊಂಡಂತೆ 12 ವಿಭಾಗಗಳನ್ನು ಹೊಂದಿದ್ದೇವೆ ಎಂದು ಕಾರ್ಯದರ್ಶಿ ಅನಿಲ್ ಕುಮಾರ್ ನಸ್ಸಾ ಹೇಳಿದ್ದಾರೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…