ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ತನಿಖಾ ಸಂಸ್ಥೆಯ ಮೂಲಗಳು ಶನಿವಾರ ತಿಳಿಸಿವೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಆಗಸ್ಟ್ 24 ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಸಿಎಂ ಸೋರೆನ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ.
ಇದಕ್ಕೂ ಮೊದಲು ಆಗಸ್ಟ್ 14 ರಂದು, ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋರೆನ್ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಆದರೆ, ರಾಜ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ತಯಾರಿಯಲ್ಲಿ ನಿರತರಾಗಿದ್ದರಿಂದ ಸೋರೆನ್ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.
ಸ್ವಾತಂತ್ರ್ಯ ದಿನದ ಕಾರ್ಯಕ್ರಮದ ಸಿದ್ಧತೆಗಳು ಒಂದು ವಾರದ ಮುಂಚೆಯೇ ಪ್ರಾರಂಭವಾಗುತ್ತವೆ ಮತ್ತು ಈ ಸಂಬಂಧ ಅನೇಕ ಸಭೆಗಳು ನಿಗದಿಯಾಗಿರುತ್ತವೆ. ಆಗಸ್ಟ್ 14 ಒಂದು ಪ್ರಮುಖ ದಿನವಾಗಿದೆ. ಆಗಸ್ಟ್ 14 ರಂದು ನಿಮ್ಮ ಮುಂದೆ ಹಾಜರಾಗುವಂತೆ ನನಗೆ ಸಮನ್ಸ್ ನೀಡಿರುವುದು ಉದ್ದೇಶಪೂರ್ವಕ ಮತ್ತು ಜಾರ್ಖಂಡ್ ರಾಜ್ಯದ ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರ ಮತ್ತು ಜಾರ್ಖಂಡ್ ರಾಜ್ಯದ ಜನರ ಖ್ಯಾತಿಯನ್ನು ಹಾಳುಮಾಡುವ ತಂತ್ರ ಎಂದು ಹೇಮಂತ್ ಸೊರೆನ್ ಅವರು ಹೇಳಿದ್ದರು.
ಜಾರ್ಖಂಡ್ನ ಸಾಹೇಬ್ಗಂಜ್ ಜಿಲ್ಲೆಯಲ್ಲಿ ನಡೆಸಿರುವ ಅಕ್ರಮ ಗಣಿಕಾರಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಿಮಂತ್ ಸೊರೆನ್ ಹೇಳಿಕೆ ದಾಖಲಿಸಲು ಸಮನ್ಸ್ ನೀಡಲಾಗಿದೆ.
ರಾಯಚೂರು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಯಚೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ…
ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…
ರಾಮನಗರ: ಜಿಮ್ ಟ್ರೇನರ್ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್ ಬಗ್ ರಿಲೀಫ್ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…
ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…