ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ತನಿಖಾ ಸಂಸ್ಥೆಯ ಮೂಲಗಳು ಶನಿವಾರ ತಿಳಿಸಿವೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಆಗಸ್ಟ್ 24 ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಸಿಎಂ ಸೋರೆನ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ.
ಇದಕ್ಕೂ ಮೊದಲು ಆಗಸ್ಟ್ 14 ರಂದು, ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋರೆನ್ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಆದರೆ, ರಾಜ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ತಯಾರಿಯಲ್ಲಿ ನಿರತರಾಗಿದ್ದರಿಂದ ಸೋರೆನ್ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.
ಸ್ವಾತಂತ್ರ್ಯ ದಿನದ ಕಾರ್ಯಕ್ರಮದ ಸಿದ್ಧತೆಗಳು ಒಂದು ವಾರದ ಮುಂಚೆಯೇ ಪ್ರಾರಂಭವಾಗುತ್ತವೆ ಮತ್ತು ಈ ಸಂಬಂಧ ಅನೇಕ ಸಭೆಗಳು ನಿಗದಿಯಾಗಿರುತ್ತವೆ. ಆಗಸ್ಟ್ 14 ಒಂದು ಪ್ರಮುಖ ದಿನವಾಗಿದೆ. ಆಗಸ್ಟ್ 14 ರಂದು ನಿಮ್ಮ ಮುಂದೆ ಹಾಜರಾಗುವಂತೆ ನನಗೆ ಸಮನ್ಸ್ ನೀಡಿರುವುದು ಉದ್ದೇಶಪೂರ್ವಕ ಮತ್ತು ಜಾರ್ಖಂಡ್ ರಾಜ್ಯದ ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರ ಮತ್ತು ಜಾರ್ಖಂಡ್ ರಾಜ್ಯದ ಜನರ ಖ್ಯಾತಿಯನ್ನು ಹಾಳುಮಾಡುವ ತಂತ್ರ ಎಂದು ಹೇಮಂತ್ ಸೊರೆನ್ ಅವರು ಹೇಳಿದ್ದರು.
ಜಾರ್ಖಂಡ್ನ ಸಾಹೇಬ್ಗಂಜ್ ಜಿಲ್ಲೆಯಲ್ಲಿ ನಡೆಸಿರುವ ಅಕ್ರಮ ಗಣಿಕಾರಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಿಮಂತ್ ಸೊರೆನ್ ಹೇಳಿಕೆ ದಾಖಲಿಸಲು ಸಮನ್ಸ್ ನೀಡಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…