ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ತನಿಖಾ ಸಂಸ್ಥೆಯ ಮೂಲಗಳು ಶನಿವಾರ ತಿಳಿಸಿವೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಆಗಸ್ಟ್ 24 ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಸಿಎಂ ಸೋರೆನ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ.
ಇದಕ್ಕೂ ಮೊದಲು ಆಗಸ್ಟ್ 14 ರಂದು, ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋರೆನ್ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಆದರೆ, ರಾಜ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ತಯಾರಿಯಲ್ಲಿ ನಿರತರಾಗಿದ್ದರಿಂದ ಸೋರೆನ್ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.
ಸ್ವಾತಂತ್ರ್ಯ ದಿನದ ಕಾರ್ಯಕ್ರಮದ ಸಿದ್ಧತೆಗಳು ಒಂದು ವಾರದ ಮುಂಚೆಯೇ ಪ್ರಾರಂಭವಾಗುತ್ತವೆ ಮತ್ತು ಈ ಸಂಬಂಧ ಅನೇಕ ಸಭೆಗಳು ನಿಗದಿಯಾಗಿರುತ್ತವೆ. ಆಗಸ್ಟ್ 14 ಒಂದು ಪ್ರಮುಖ ದಿನವಾಗಿದೆ. ಆಗಸ್ಟ್ 14 ರಂದು ನಿಮ್ಮ ಮುಂದೆ ಹಾಜರಾಗುವಂತೆ ನನಗೆ ಸಮನ್ಸ್ ನೀಡಿರುವುದು ಉದ್ದೇಶಪೂರ್ವಕ ಮತ್ತು ಜಾರ್ಖಂಡ್ ರಾಜ್ಯದ ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರ ಮತ್ತು ಜಾರ್ಖಂಡ್ ರಾಜ್ಯದ ಜನರ ಖ್ಯಾತಿಯನ್ನು ಹಾಳುಮಾಡುವ ತಂತ್ರ ಎಂದು ಹೇಮಂತ್ ಸೊರೆನ್ ಅವರು ಹೇಳಿದ್ದರು.
ಜಾರ್ಖಂಡ್ನ ಸಾಹೇಬ್ಗಂಜ್ ಜಿಲ್ಲೆಯಲ್ಲಿ ನಡೆಸಿರುವ ಅಕ್ರಮ ಗಣಿಕಾರಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಿಮಂತ್ ಸೊರೆನ್ ಹೇಳಿಕೆ ದಾಖಲಿಸಲು ಸಮನ್ಸ್ ನೀಡಲಾಗಿದೆ.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…