BREAKING NEWS

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಸಿಎಂಗೆ ಇಡಿ ಸಮನ್ಸ್ ಜಾರಿ

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ತನಿಖಾ ಸಂಸ್ಥೆಯ ಮೂಲಗಳು ಶನಿವಾರ ತಿಳಿಸಿವೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಆಗಸ್ಟ್ 24 ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಸಿಎಂ ಸೋರೆನ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ.

ಇದಕ್ಕೂ ಮೊದಲು ಆಗಸ್ಟ್ 14 ರಂದು, ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋರೆನ್ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಆದರೆ, ರಾಜ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ತಯಾರಿಯಲ್ಲಿ ನಿರತರಾಗಿದ್ದರಿಂದ ಸೋರೆನ್ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.

ಸ್ವಾತಂತ್ರ್ಯ ದಿನದ ಕಾರ್ಯಕ್ರಮದ ಸಿದ್ಧತೆಗಳು ಒಂದು ವಾರದ ಮುಂಚೆಯೇ ಪ್ರಾರಂಭವಾಗುತ್ತವೆ ಮತ್ತು ಈ ಸಂಬಂಧ ಅನೇಕ ಸಭೆಗಳು ನಿಗದಿಯಾಗಿರುತ್ತವೆ. ಆಗಸ್ಟ್ 14 ಒಂದು ಪ್ರಮುಖ ದಿನವಾಗಿದೆ. ಆಗಸ್ಟ್ 14 ರಂದು ನಿಮ್ಮ ಮುಂದೆ ಹಾಜರಾಗುವಂತೆ ನನಗೆ ಸಮನ್ಸ್ ನೀಡಿರುವುದು ಉದ್ದೇಶಪೂರ್ವಕ ಮತ್ತು ಜಾರ್ಖಂಡ್ ರಾಜ್ಯದ ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರ ಮತ್ತು ಜಾರ್ಖಂಡ್ ರಾಜ್ಯದ ಜನರ ಖ್ಯಾತಿಯನ್ನು ಹಾಳುಮಾಡುವ ತಂತ್ರ ಎಂದು ಹೇಮಂತ್ ಸೊರೆನ್ ಅವರು ಹೇಳಿದ್ದರು.

ಜಾರ್ಖಂಡ್‌ನ ಸಾಹೇಬ್‌ಗಂಜ್ ಜಿಲ್ಲೆಯಲ್ಲಿ ನಡೆಸಿರುವ ಅಕ್ರಮ ಗಣಿಕಾರಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಿಮಂತ್ ಸೊರೆನ್ ಹೇಳಿಕೆ ದಾಖಲಿಸಲು ಸಮನ್ಸ್ ನೀಡಲಾಗಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

30 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

32 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

34 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

35 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

40 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

45 mins ago