ಚೆನ್ನೈ : ತಿರುಚಿರಾಪಳ್ಳಿ ಮೂಲದ ಜ್ಯೂವೆಲರಿ ಗ್ರೂಪ್ ವಿರುದ್ಧ ೧೦೦ ಕೋಟಿ ವಂಚನೆಗೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಜಾರಿ ನಿರ್ದೇಶನಾಲಯ ವಿಚಾರಣೆಗಾಗಿ ಸಮನ್ಸ್ ನೀಡಿದೆ.
ತನಿಖೆಯು ತಿರುಚಿರಾಪಳ್ಳಿ ಮಲದ ಪಾಲುದಾರಿಕೆ ಸಂಸ್ಥೆಯಾದ ಪ್ರಣವ್ ಜ್ಯೂವೆಲರ್ಸ್ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ, ಆ ಸಂಸ್ಥೆಯ ಮೇಲೆ ನವೆಂಬರ್ ೨೦ ರಂದು ದಾಳಿ ನಡೆಸಿ ೨೩.೭೦ ಲಕ್ಷ ನಗದು ಹಾಗೂ ಚಿನ್ನಾಭರಣವನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿತ್ತು. ಪ್ರಕಾಶ್ ರಾಜ್ ಅವರು ಈ ಕಂಪನಿ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ ಹಾಗಾಗಿ ಇವರು ಮುಂದಿನ ವಾರ ವಿಚಾರಣೆಗಾಗಿ ಇಡಿ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
ಪ್ರಣವ್ ಜ್ಯುವೆಲರ್ಸ್ ಮತ್ತು ಇತರರು ಚಿನ್ನದ ಹೂಡಿಕೆ ಯೋಜನೆಯ ನೆಪದಲ್ಲಿ ಸಾರ್ವಜನಿಕರಿಂದ ೧೦೦ ಕೋಟಿ ಗೂ ಹೆಚ್ಚಿನ ಆದಾಯವನ್ನು ಭರವಸೆಯೊಂದಿಗೆ ಸಂಗ್ರಹಿಸಿದ್ದಾರೆ ಎಂದು ಫೆಡರಲ್ ಏಜೆನ್ಸಿ ಹೇಳಿಕೆಯಲ್ಲಿ ತಿಳಿಸಿದೆ ಎಂದು ಪೊಲೀಸರು ದೂರಿನಲ್ಲಿ ತಿಳಿಸಿದ್ದಾರೆ. ತಮಿಳುನಾಡು ಆರ್ಥಿಕ ಅಪರಾಧ ವಿಭಾಗದ ಎಫ್ಐಆರ್ ನಿಂದ ಇಡಿ ಪ್ರಕರಣವನ್ನು ದಾಖಲಿಸಿದೆ.
ಕನ್ನಡ, ತಮಿಳು, ಹಿಂದಿ ಭಾಷೆ ಸೇರಿದಂತೆ ಹಲವಾರು ಭಾಷೆಗಳ ಚಲನಚಿತ್ರಗಳಲ್ಲಿ ವಿಶಿಷ್ಟ ಪಾತ್ರಗಳ ಮೂಲಕ ಹೆಸರಾಗಿರುವ ನಟ ಪ್ರಕಾಶ್ ರಾಜ್, ಬಿಜೆಪಿಯನ್ನು ನಿರಂತರವಾಗಿ ಟೀಕಿಸುತ್ತಾ ಬರುತ್ತಿದ್ದಾರೆ. ಈಗ ಇವರ ಮೇಲೆ ಇಡಿ ದಾಳಿ ಬಗ್ಗೆ ಪರ-ವಿರೋಧ ಚರ್ಚೆಗಳು ಹೆಚ್ಚಾಗಿವೆ.
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…