ಚೆನ್ನೈ : ತಿರುಚಿರಾಪಳ್ಳಿ ಮೂಲದ ಜ್ಯೂವೆಲರಿ ಗ್ರೂಪ್ ವಿರುದ್ಧ ೧೦೦ ಕೋಟಿ ವಂಚನೆಗೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಜಾರಿ ನಿರ್ದೇಶನಾಲಯ ವಿಚಾರಣೆಗಾಗಿ ಸಮನ್ಸ್ ನೀಡಿದೆ.
ತನಿಖೆಯು ತಿರುಚಿರಾಪಳ್ಳಿ ಮಲದ ಪಾಲುದಾರಿಕೆ ಸಂಸ್ಥೆಯಾದ ಪ್ರಣವ್ ಜ್ಯೂವೆಲರ್ಸ್ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ, ಆ ಸಂಸ್ಥೆಯ ಮೇಲೆ ನವೆಂಬರ್ ೨೦ ರಂದು ದಾಳಿ ನಡೆಸಿ ೨೩.೭೦ ಲಕ್ಷ ನಗದು ಹಾಗೂ ಚಿನ್ನಾಭರಣವನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿತ್ತು. ಪ್ರಕಾಶ್ ರಾಜ್ ಅವರು ಈ ಕಂಪನಿ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ ಹಾಗಾಗಿ ಇವರು ಮುಂದಿನ ವಾರ ವಿಚಾರಣೆಗಾಗಿ ಇಡಿ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
ಪ್ರಣವ್ ಜ್ಯುವೆಲರ್ಸ್ ಮತ್ತು ಇತರರು ಚಿನ್ನದ ಹೂಡಿಕೆ ಯೋಜನೆಯ ನೆಪದಲ್ಲಿ ಸಾರ್ವಜನಿಕರಿಂದ ೧೦೦ ಕೋಟಿ ಗೂ ಹೆಚ್ಚಿನ ಆದಾಯವನ್ನು ಭರವಸೆಯೊಂದಿಗೆ ಸಂಗ್ರಹಿಸಿದ್ದಾರೆ ಎಂದು ಫೆಡರಲ್ ಏಜೆನ್ಸಿ ಹೇಳಿಕೆಯಲ್ಲಿ ತಿಳಿಸಿದೆ ಎಂದು ಪೊಲೀಸರು ದೂರಿನಲ್ಲಿ ತಿಳಿಸಿದ್ದಾರೆ. ತಮಿಳುನಾಡು ಆರ್ಥಿಕ ಅಪರಾಧ ವಿಭಾಗದ ಎಫ್ಐಆರ್ ನಿಂದ ಇಡಿ ಪ್ರಕರಣವನ್ನು ದಾಖಲಿಸಿದೆ.
ಕನ್ನಡ, ತಮಿಳು, ಹಿಂದಿ ಭಾಷೆ ಸೇರಿದಂತೆ ಹಲವಾರು ಭಾಷೆಗಳ ಚಲನಚಿತ್ರಗಳಲ್ಲಿ ವಿಶಿಷ್ಟ ಪಾತ್ರಗಳ ಮೂಲಕ ಹೆಸರಾಗಿರುವ ನಟ ಪ್ರಕಾಶ್ ರಾಜ್, ಬಿಜೆಪಿಯನ್ನು ನಿರಂತರವಾಗಿ ಟೀಕಿಸುತ್ತಾ ಬರುತ್ತಿದ್ದಾರೆ. ಈಗ ಇವರ ಮೇಲೆ ಇಡಿ ದಾಳಿ ಬಗ್ಗೆ ಪರ-ವಿರೋಧ ಚರ್ಚೆಗಳು ಹೆಚ್ಚಾಗಿವೆ.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತನಿಗೂ ನೋಟಿಸ್ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಅಲಿ ಅವರಿಗೆ…
ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…
ಬೆಂಗಳೂರು: 2026ರ ಐಪಿಎಲ್ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್ಸಿಎ ಚುನಾವಣೆ ಮತದಾನದ ವೇಳೆ…
ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…