BREAKING NEWS

ಅಕ್ರಮ ಹಣ ವರ್ಗಾವಣೆ: ನಟ ಪ್ರಕಾಶ್‌ ರಾಜ್‌ಗೆ ಇಡಿ ಸಮನ್ಸ್‌

ಚೆನ್ನೈ : ತಿರುಚಿರಾಪಳ್ಳಿ ಮೂಲದ ಜ್ಯೂವೆಲರಿ ಗ್ರೂಪ್‌ ವಿರುದ್ಧ ೧೦೦ ಕೋಟಿ ವಂಚನೆಗೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರಿಗೆ ಜಾರಿ ನಿರ್ದೇಶನಾಲಯ ವಿಚಾರಣೆಗಾಗಿ ಸಮನ್ಸ್‌ ನೀಡಿದೆ.

ತನಿಖೆಯು ತಿರುಚಿರಾಪಳ್ಳಿ ಮಲದ ಪಾಲುದಾರಿಕೆ ಸಂಸ್ಥೆಯಾದ ಪ್ರಣವ್‌ ಜ್ಯೂವೆಲರ್ಸ್‌ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ, ಆ ಸಂಸ್ಥೆಯ ಮೇಲೆ ನವೆಂಬರ್‌ ೨೦ ರಂದು ದಾಳಿ ನಡೆಸಿ ೨೩.೭೦ ಲಕ್ಷ ನಗದು ಹಾಗೂ ಚಿನ್ನಾಭರಣವನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿತ್ತು. ಪ್ರಕಾಶ್‌ ರಾಜ್‌ ಅವರು ಈ ಕಂಪನಿ ಬ್ರಾಂಡ್‌ ಅಂಬಾಸಿಡರ್‌ ಆಗಿದ್ದಾರೆ ಹಾಗಾಗಿ ಇವರು ಮುಂದಿನ ವಾರ ವಿಚಾರಣೆಗಾಗಿ ಇಡಿ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.

ಪ್ರಣವ್‌ ಜ್ಯುವೆಲರ್ಸ್‌ ಮತ್ತು ಇತರರು ಚಿನ್ನದ ಹೂಡಿಕೆ ಯೋಜನೆಯ ನೆಪದಲ್ಲಿ ಸಾರ್ವಜನಿಕರಿಂದ ೧೦೦ ಕೋಟಿ ಗೂ ಹೆಚ್ಚಿನ ಆದಾಯವನ್ನು ಭರವಸೆಯೊಂದಿಗೆ ಸಂಗ್ರಹಿಸಿದ್ದಾರೆ ಎಂದು ಫೆಡರಲ್‌ ಏಜೆನ್ಸಿ ಹೇಳಿಕೆಯಲ್ಲಿ ತಿಳಿಸಿದೆ ಎಂದು ಪೊಲೀಸರು ದೂರಿನಲ್ಲಿ ತಿಳಿಸಿದ್ದಾರೆ. ತಮಿಳುನಾಡು ಆರ್ಥಿಕ ಅಪರಾಧ ವಿಭಾಗದ ಎಫ್‌ಐಆರ್‌ ನಿಂದ ಇಡಿ ಪ್ರಕರಣವನ್ನು ದಾಖಲಿಸಿದೆ.

ಕನ್ನಡ, ತಮಿಳು, ಹಿಂದಿ ಭಾಷೆ ಸೇರಿದಂತೆ ಹಲವಾರು ಭಾಷೆಗಳ ಚಲನಚಿತ್ರಗಳಲ್ಲಿ ವಿಶಿಷ್ಟ ಪಾತ್ರಗಳ ಮೂಲಕ ಹೆಸರಾಗಿರುವ ನಟ ಪ್ರಕಾಶ್‌ ರಾಜ್‌, ಬಿಜೆಪಿಯನ್ನು ನಿರಂತರವಾಗಿ ಟೀಕಿಸುತ್ತಾ ಬರುತ್ತಿದ್ದಾರೆ. ಈಗ ಇವರ ಮೇಲೆ ಇಡಿ ದಾಳಿ ಬಗ್ಗೆ ಪರ-ವಿರೋಧ ಚರ್ಚೆಗಳು ಹೆಚ್ಚಾಗಿವೆ.

andolanait

Recent Posts

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

31 mins ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

1 hour ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

2 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

3 hours ago

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

7 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

9 hours ago