ಬೆಂಗಳೂರು: ಕನಕಪುರ ತಾಲ್ಲೂಕಿನ ಸಾತನೂರು ಬಳಿ ಜಾನುವಾರು ಸಾಗಣೆ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಬಿಜೆಪಿ ಸರ್ಕಾರ ವ್ಯವಸ್ಥಿತವಾಗಿ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆಯೇ ಕಾರಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಕನಕಪುರ ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ಮಂಡ್ಯ ಮೂಲದ ಇರ್ಗೀಷ್ ಪಾಷ ಅನುಮಾನಸ್ಪದವಾಗಿ ಮೃತಪಟ್ಟಿದ್ದರು.
ಈ ಘಟನೆಯನ್ನು ಖಂಡಿಸಿರುವ ಕುಮಾರಸ್ವಾಮಿ, ಜಾನುವಾರು ಸಾಗಿಸುತ್ತಿದ್ದಾನೆ ಎಂದರೆ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬಹುದಿತ್ತು ಅಥವಾ ಮಾಹಿತಿ ನೀಡಬಹುದಿತ್ತು. ಅದರ ಹೊರತಾಗಿ ಹತ್ಯೆ ಮಾಡುವುದು ಎಂದರೆ ಅರ್ಥವೇನು? ಚುನಾವಣೆ ಹೊತ್ತಿನಲ್ಲಿ ಇದರ ಹಿಂದಿರುವ ಷಡ್ಯಂತ್ರ ಎಂಥದ್ದು ಎಂದು ಯಾರಿಗಾದರೂ ಅರ್ಥ ಆಗುವಂತದ್ದೇ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಎಲ್ಲಿಗೆ ಬಂದು ನಿಂತಿದೆ? ಎಂದು ಪ್ರಶ್ನಿಸಿದ್ದಾರೆ.
ಯುವಕನ ಕೊಲೆಯಾದ ರಾತ್ರಿ ಆರೋಪಿ ಮತ್ತವನ ಸಹಚರರು ರಸ್ತೆಯಲ್ಲಿ ಕ್ರಿಕೆಟ್ ಬ್ಯಾಟುಗಳನ್ನು ಹಿಡಿದು ಗೋ ರಕ್ಷಕನ ಸೋಗು ಹಾಕಿಕೊಂಡು ಪಹರೆ ಕಾಯುವ ನಾಟಕದ ವಿಡಿಯೋ ಮಾಡಿ ತನ್ನ ಜಾಲತಾಣದಲ್ಲಿಯೇ ಹಾಕಿಕೊಂಡಿದ್ದಾನೆ. ಅವರ ಉದ್ದೇಶವೇ ಬೇರೆ ಇತ್ತು ಎನ್ನುವುದು ಸ್ಪಷ್ಟ. ಇದಕ್ಕಿಂತ ಸಾಕ್ಷಿ ಬೇಕೆ? ಕೂಡಲೇ ಪೊಲೀಸರು ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾತ್ರಿ ಹೊತ್ತು ಇವರು ರಸ್ತೆಯಲ್ಲಿ ಕ್ರಿಕೆಟ್ ಬ್ಯಾಟುಗಳನ್ನು ಹಿಡಿದುಕೊಂಡು ಗಸ್ತು ತಿರುಗುತ್ತಿದ್ದರು ಎಂದರೆ, ಇವರಿಗೆ ಪೊಲೀಸರ ಮೌನ ಅನುಮತಿ ಇತ್ತಾ? ಇಲ್ಲವೇ, ಇವರೇನು ಮಫ್ತಿ ಪೊಲೀಸರಾ? ಅಥವಾ ಗೋ ರಕ್ಷಣೆ ನೆಪದಲ್ಲಿ ದರೋಡೆಗೆ ಹೊಂಚು ಹಾಕಿ ಕೂತಿದ್ದರಾ? ಈ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ ಎಂದು ಹೇಳಿದ್ದಾರೆ.
ನಿಜಕ್ಕಾದರೆ, ಗೋ ಸಂಕ್ಷಣೆಯ ಸೋಗಿನ ಈ ಸೋಗಲಾಡಿಗಳಿಗೆ ಆಶ್ರಯ, ಮೇವು ಇಲ್ಲದೆ ಬೀದಿಪಾಲಾಗಿರುವ ಅನಾಥ ಗೋವುಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಆದರೆ, ಜಾತಿ ಧರ್ಮಗಳ ನಡುವೆ ಬೆಂಕಿ ಇಟ್ಟು ಚಳಿ ಕಾಯಿಸಿಕೊಳ್ಳುವುದೇ ಇವರ ಜಾಯಮಾನ. ಪೊಲೀಸ್ ವ್ಯವಸ್ಥೆ ಗಾಢ ನಿದ್ದೆಯಲ್ಲಿದೆಯಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಈ ಘಟನೆ ನಡೆದಿದೆ. ರಾಜ್ಯದಲ್ಲಿ ಕೋಮು ಸೌಹಾರ್ದ ಕದಡಿ ಹಿಂಸಾಚಾರ ಸೃಷ್ಟಿಸುವುದು ಮತ್ತು ಚುನಾವಣೆ ಹೊತ್ತಿನಲ್ಲಿ ಕರ್ನಾಟಕವನ್ನು ಕದಡುವುದೇ ಇವರ ದುರುದ್ದೇಶ ಆಗಿರುವಂತಿದೆ. ನನಗೆ ಈ ಹತ್ಯೆ ಆಘಾತ ಉಂಟು ಮಾಡಿದೆ ಎಂದು ಹೇಳಿದ್ದಾರೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…