BREAKING NEWS

ಬಿಜೆಪಿ ಸರ್ಕಾರ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆ ಹತ್ಯೆಗೆ ಕಾರಣ:ಎಚ್‌ಡಿಕೆ

ಬೆಂಗಳೂರು: ಕನಕಪುರ ತಾಲ್ಲೂಕಿನ ಸಾತನೂರು ಬಳಿ ಜಾನುವಾರು ಸಾಗಣೆ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಬಿಜೆಪಿ ಸರ್ಕಾರ ವ್ಯವಸ್ಥಿತವಾಗಿ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆಯೇ ಕಾರಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.‌ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕನಕಪುರ ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ಮಂಡ್ಯ ಮೂಲದ ಇರ್ಗೀಷ್ ಪಾಷ ಅನುಮಾನಸ್ಪದವಾಗಿ ಮೃತಪಟ್ಟಿದ್ದರು.

ಈ ಘಟನೆಯನ್ನು ಖಂಡಿಸಿರುವ ಕುಮಾರಸ್ವಾಮಿ, ಜಾನುವಾರು ಸಾಗಿಸುತ್ತಿದ್ದಾನೆ ಎಂದರೆ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬಹುದಿತ್ತು ಅಥವಾ ಮಾಹಿತಿ ನೀಡಬಹುದಿತ್ತು. ಅದರ ಹೊರತಾಗಿ ಹತ್ಯೆ ಮಾಡುವುದು ಎಂದರೆ ಅರ್ಥವೇನು? ಚುನಾವಣೆ ಹೊತ್ತಿನಲ್ಲಿ ಇದರ ಹಿಂದಿರುವ ಷಡ್ಯಂತ್ರ ಎಂಥದ್ದು ಎಂದು ಯಾರಿಗಾದರೂ ಅರ್ಥ ಆಗುವಂತದ್ದೇ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಎಲ್ಲಿಗೆ ಬಂದು ನಿಂತಿದೆ? ಎಂದು ಪ್ರಶ್ನಿಸಿದ್ದಾರೆ.

ಯುವಕನ ಕೊಲೆಯಾದ ರಾತ್ರಿ ಆರೋಪಿ ಮತ್ತವನ ಸಹಚರರು ರಸ್ತೆಯಲ್ಲಿ ಕ್ರಿಕೆಟ್ ಬ್ಯಾಟುಗಳನ್ನು ಹಿಡಿದು ಗೋ ರಕ್ಷಕನ ಸೋಗು ಹಾಕಿಕೊಂಡು ಪಹರೆ ಕಾಯುವ ನಾಟಕದ ವಿಡಿಯೋ ಮಾಡಿ ತನ್ನ ಜಾಲತಾಣದಲ್ಲಿಯೇ ಹಾಕಿಕೊಂಡಿದ್ದಾನೆ. ಅವರ ಉದ್ದೇಶವೇ ಬೇರೆ ಇತ್ತು ಎನ್ನುವುದು ಸ್ಪಷ್ಟ. ಇದಕ್ಕಿಂತ ಸಾಕ್ಷಿ ಬೇಕೆ? ಕೂಡಲೇ ಪೊಲೀಸರು ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾತ್ರಿ ಹೊತ್ತು ಇವರು ರಸ್ತೆಯಲ್ಲಿ ಕ್ರಿಕೆಟ್ ಬ್ಯಾಟುಗಳನ್ನು ಹಿಡಿದುಕೊಂಡು ಗಸ್ತು ತಿರುಗುತ್ತಿದ್ದರು ಎಂದರೆ, ಇವರಿಗೆ ಪೊಲೀಸರ ಮೌನ ಅನುಮತಿ ಇತ್ತಾ? ಇಲ್ಲವೇ, ಇವರೇನು ಮಫ್ತಿ ಪೊಲೀಸರಾ? ಅಥವಾ ಗೋ ರಕ್ಷಣೆ ನೆಪದಲ್ಲಿ ದರೋಡೆಗೆ ಹೊಂಚು ಹಾಕಿ ಕೂತಿದ್ದರಾ? ಈ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ ಎಂದು ಹೇಳಿದ್ದಾರೆ.

ನಿಜಕ್ಕಾದರೆ, ಗೋ ಸಂಕ್ಷಣೆಯ ಸೋಗಿನ ಈ ಸೋಗಲಾಡಿಗಳಿಗೆ ಆಶ್ರಯ, ಮೇವು ಇಲ್ಲದೆ ಬೀದಿಪಾಲಾಗಿರುವ ಅನಾಥ ಗೋವುಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಆದರೆ, ಜಾತಿ ಧರ್ಮಗಳ ನಡುವೆ ಬೆಂಕಿ ಇಟ್ಟು ಚಳಿ ಕಾಯಿಸಿಕೊಳ್ಳುವುದೇ ಇವರ ಜಾಯಮಾನ. ಪೊಲೀಸ್ ವ್ಯವಸ್ಥೆ ಗಾಢ ನಿದ್ದೆಯಲ್ಲಿದೆಯಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಈ ಘಟನೆ ನಡೆದಿದೆ. ರಾಜ್ಯದಲ್ಲಿ ಕೋಮು ಸೌಹಾರ್ದ ಕದಡಿ ಹಿಂಸಾಚಾರ ಸೃಷ್ಟಿಸುವುದು ಮತ್ತು ಚುನಾವಣೆ ಹೊತ್ತಿನಲ್ಲಿ ಕರ್ನಾಟಕವನ್ನು ಕದಡುವುದೇ ಇವರ ದುರುದ್ದೇಶ ಆಗಿರುವಂತಿದೆ. ನನಗೆ ಈ ಹತ್ಯೆ ಆಘಾತ ಉಂಟು ಮಾಡಿದೆ ಎಂದು ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

8 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

8 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

8 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

8 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

8 hours ago