ಶ್ರೀನಗರ: ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದರೆ ಎಲ್ಲಾ ಧರ್ಮಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಗುಲಾಂ ನಬಿ ಆಜಾದ್ ಅವರು ಶನಿವಾರ ಹೇಳಿದ್ದಾರೆ.
ಇಂದು ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಸಿಸಿಯನ್ನು ಜಾರಿಗೊಳಿಸುವುದು “ಆರ್ಟಿಕಲ್ 370 ರದ್ದುಗೊಳಿಸದಂತೆ ಸುಲಭವಲ್ಲ” ಎಂದಿದ್ದಾರೆ.
“ಅದನ್ನು ಜಾರಿಗೊಳಿಸುವ(ಯುಸಿಸಿ) ಪ್ರಶ್ನೆಯೇ ಇಲ್ಲ. 370ನೇ ವಿಧಿಯನ್ನು ಹಿಂತೆಗೆದುಕೊಳ್ಳುವುದು ಸುಲಭವಲ್ಲ. ಎಲ್ಲಾ ಧರ್ಮಗಳು ಇದರಲ್ಲಿ ಭಾಗಿಯಾಗಿವೆ. ಮುಸ್ಲಿಮರು ಮಾತ್ರವಲ್ಲ, ಕ್ರಿಶ್ಚಿಯನ್ನರು ಮತ್ತು ಸಿಖ್ಖರು, ಆದಿವಾಸಿಗಳು, ಜೈನರು, ಪಾರ್ಸಿಗಳು ಸೇರಿದಂತೆ ಎಲ್ಲ ಜನರಿಗೂ ತೊಂದರೆಯಾಗಲಿದೆ. ಇದರಿಂದ ಯಾವುದೇ ಸರ್ಕಾರಕ್ಕೂ ಒಳ್ಳೆಯದಾಗುವುದಿಲ್ಲ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಹೇಳಿದ್ದಾರೆ.
ದೇಶದಲ್ಲಿ ಯುಸಿಸಿ ಜಾರಿಗೊಳಿಸುವ ಬಗ್ಗೆ ಯೋಚಿಸಬೇಡಿ ಎಂದು ನಾನು ಈ ಸರ್ಕಾರಕ್ಕೆ ಸೂಚಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…