ಶ್ರೀನಗರ: ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದರೆ ಎಲ್ಲಾ ಧರ್ಮಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಗುಲಾಂ ನಬಿ ಆಜಾದ್ ಅವರು ಶನಿವಾರ ಹೇಳಿದ್ದಾರೆ.
ಇಂದು ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಸಿಸಿಯನ್ನು ಜಾರಿಗೊಳಿಸುವುದು “ಆರ್ಟಿಕಲ್ 370 ರದ್ದುಗೊಳಿಸದಂತೆ ಸುಲಭವಲ್ಲ” ಎಂದಿದ್ದಾರೆ.
“ಅದನ್ನು ಜಾರಿಗೊಳಿಸುವ(ಯುಸಿಸಿ) ಪ್ರಶ್ನೆಯೇ ಇಲ್ಲ. 370ನೇ ವಿಧಿಯನ್ನು ಹಿಂತೆಗೆದುಕೊಳ್ಳುವುದು ಸುಲಭವಲ್ಲ. ಎಲ್ಲಾ ಧರ್ಮಗಳು ಇದರಲ್ಲಿ ಭಾಗಿಯಾಗಿವೆ. ಮುಸ್ಲಿಮರು ಮಾತ್ರವಲ್ಲ, ಕ್ರಿಶ್ಚಿಯನ್ನರು ಮತ್ತು ಸಿಖ್ಖರು, ಆದಿವಾಸಿಗಳು, ಜೈನರು, ಪಾರ್ಸಿಗಳು ಸೇರಿದಂತೆ ಎಲ್ಲ ಜನರಿಗೂ ತೊಂದರೆಯಾಗಲಿದೆ. ಇದರಿಂದ ಯಾವುದೇ ಸರ್ಕಾರಕ್ಕೂ ಒಳ್ಳೆಯದಾಗುವುದಿಲ್ಲ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಹೇಳಿದ್ದಾರೆ.
ದೇಶದಲ್ಲಿ ಯುಸಿಸಿ ಜಾರಿಗೊಳಿಸುವ ಬಗ್ಗೆ ಯೋಚಿಸಬೇಡಿ ಎಂದು ನಾನು ಈ ಸರ್ಕಾರಕ್ಕೆ ಸೂಚಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…