ಬೆಂಗಳೂರು : ಹೊಂದಾಣಿಕೆ ರಾಜಕಾರಣದ ಆರೋಪ ಮಾಡಿದವರ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಸಭೆಯಲ್ಲಿ ಕೆಂಡಾಮಂಡಲರಾದ ಘಟನೆ ನಡೆದಿದೆ.
ಪಕ್ಷದ ವಿರುದ್ಧ ಬಿಜೆಪಿ ನಾಯಕರೇ ಬಹಿರಂಗ ಹೇಳಿಕೆ ನೀಡಿತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ಬಿಜೆಪಿ ನಾಯಕರ ವಿವರಣೆ ಪಡೆಯಲಾಯಿತು. ಈ ವೇಳೆ ಹೊಂದಾಣಿಕೆ ರಾಜಕಾರಣದ ಬಗ್ಗೆ ಆರೋಪ ಮಾಡಿದವರ ವಿರುದ್ಧ ಗುಡುಗಿದ ಮಾಜಿ ಸಿಎಂ ಬೊಮ್ಮಾಯಿ, ರಾಜಕಾರಣದಲ್ಲಿ ಕಷ್ಟ ಪಟ್ಟು ಬಿಳಿ ಶರ್ಟ್ ಹಾಕಿಕೊಂಡಿರ್ತೇವೆ. ನೀವು ಬಂದು ಉಗಿದು ಹೋಗ್ತಿರ್ತೀರಿ. ಆರೋಪದ ಶಾಯಿ ತೆಗೆದು ನಮಗೆ ಎಸೆಯುತ್ತಿರುತ್ತೀರಿ ಎಂದು ಫುಲ್ ಗರಂ ಅಗಿದ್ದಾರೆ.
ನೀವು ಆರೋಪ ಮಾಡುತ್ತಿರುತ್ತೀರಿ. ಅದರ ಹಿಂದೆ ಏನಾಗಿರುತ್ತದೆ ಅಂತ ಗೊತ್ತಿರಲ್ಲ ನಿಮಗೆ. ನೀವು ಮಾಡಿರುವ ಕಲೆಯನ್ನು ಅಳಿಸೋಕೆ ಬಹಳ ಸಮಯಬೇಕು. ಈ ರೀತಿ ಯಾರೂ ಮಾದಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯ ಬಿಜೆಪಿ ಕೆಲ ನಾಯಕರು ಹೊಂದಾಣಿಕೆ ರಾಜಕಾರಣದ ಬಗ್ಗೆ ಅರೋಪಿಸಿದ್ದರು. ಅಲ್ಲದೇ ಪಕ್ಷದ ವಿರುದ್ಧವೇ ಬಹಿರಂಗ ಹೇಳಿಕೆ ನೀಡಿದ್ದರು ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಇಂದು ತೀಕ್ಷ್ಣವಾಗಿ ಮಾತನಾಡಿದ್ದಾರೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…