BREAKING NEWS

ರಾಜಕಾರಣದಲ್ಲಿ ಕಷ್ಟ ಪಟ್ಟು ಬಿಳಿ ಶರ್ಟ್ ಹಾಕಿಕೊಂಡಿರ್ತೇವೆ ನೀವು ಬಂದು ಉಗಿದು ಹೋಗ್ತಿರ್ತೀರಿ : ಬಸವರಾಜ್ ಬೊಮ್ಮಾಯಿ ಅಕ್ರೋಶ

ಬೆಂಗಳೂರು : ಹೊಂದಾಣಿಕೆ ರಾಜಕಾರಣದ ಆರೋಪ ಮಾಡಿದವರ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಸಭೆಯಲ್ಲಿ ಕೆಂಡಾಮಂಡಲರಾದ ಘಟನೆ ನಡೆದಿದೆ.

ಪಕ್ಷದ ವಿರುದ್ಧ ಬಿಜೆಪಿ ನಾಯಕರೇ ಬಹಿರಂಗ ಹೇಳಿಕೆ ನೀಡಿತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ಬಿಜೆಪಿ ನಾಯಕರ ವಿವರಣೆ ಪಡೆಯಲಾಯಿತು. ಈ ವೇಳೆ ಹೊಂದಾಣಿಕೆ ರಾಜಕಾರಣದ ಬಗ್ಗೆ ಆರೋಪ ಮಾಡಿದವರ ವಿರುದ್ಧ ಗುಡುಗಿದ ಮಾಜಿ ಸಿಎಂ ಬೊಮ್ಮಾಯಿ, ರಾಜಕಾರಣದಲ್ಲಿ ಕಷ್ಟ ಪಟ್ಟು ಬಿಳಿ ಶರ್ಟ್ ಹಾಕಿಕೊಂಡಿರ್ತೇವೆ. ನೀವು ಬಂದು ಉಗಿದು ಹೋಗ್ತಿರ್ತೀರಿ. ಆರೋಪದ ಶಾಯಿ ತೆಗೆದು ನಮಗೆ ಎಸೆಯುತ್ತಿರುತ್ತೀರಿ ಎಂದು ಫುಲ್ ಗರಂ ಅಗಿದ್ದಾರೆ.
ನೀವು ಆರೋಪ ಮಾಡುತ್ತಿರುತ್ತೀರಿ. ಅದರ ಹಿಂದೆ ಏನಾಗಿರುತ್ತದೆ ಅಂತ ಗೊತ್ತಿರಲ್ಲ ನಿಮಗೆ. ನೀವು ಮಾಡಿರುವ ಕಲೆಯನ್ನು ಅಳಿಸೋಕೆ ಬಹಳ ಸಮಯಬೇಕು. ಈ ರೀತಿ ಯಾರೂ ಮಾದಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯ ಬಿಜೆಪಿ ಕೆಲ ನಾಯಕರು ಹೊಂದಾಣಿಕೆ ರಾಜಕಾರಣದ ಬಗ್ಗೆ ಅರೋಪಿಸಿದ್ದರು. ಅಲ್ಲದೇ ಪಕ್ಷದ ವಿರುದ್ಧವೇ ಬಹಿರಂಗ ಹೇಳಿಕೆ ನೀಡಿದ್ದರು ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಇಂದು ತೀಕ್ಷ್ಣವಾಗಿ ಮಾತನಾಡಿದ್ದಾರೆ.

lokesh

Recent Posts

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

1 min ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

10 mins ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

22 mins ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

52 mins ago

ನಾಳೆ,ನಾಡಿದ್ದು ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…

1 hour ago

ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆ : ನಂಜೇಗೌಡ ವಿನ್ನರ್‌ ಎಂದ ಸುಪ್ರೀಂ

ಬೆಂಗಳೂರು : ಕೋಲಾರ ಜಿಲ್ಲೆ, ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ನಂಜೇಗೌಡ ಅವರು…

2 hours ago