ಬೆಂಗಳೂರು : ಹೊಂದಾಣಿಕೆ ರಾಜಕಾರಣದ ಆರೋಪ ಮಾಡಿದವರ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಸಭೆಯಲ್ಲಿ ಕೆಂಡಾಮಂಡಲರಾದ ಘಟನೆ ನಡೆದಿದೆ.
ಪಕ್ಷದ ವಿರುದ್ಧ ಬಿಜೆಪಿ ನಾಯಕರೇ ಬಹಿರಂಗ ಹೇಳಿಕೆ ನೀಡಿತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ಬಿಜೆಪಿ ನಾಯಕರ ವಿವರಣೆ ಪಡೆಯಲಾಯಿತು. ಈ ವೇಳೆ ಹೊಂದಾಣಿಕೆ ರಾಜಕಾರಣದ ಬಗ್ಗೆ ಆರೋಪ ಮಾಡಿದವರ ವಿರುದ್ಧ ಗುಡುಗಿದ ಮಾಜಿ ಸಿಎಂ ಬೊಮ್ಮಾಯಿ, ರಾಜಕಾರಣದಲ್ಲಿ ಕಷ್ಟ ಪಟ್ಟು ಬಿಳಿ ಶರ್ಟ್ ಹಾಕಿಕೊಂಡಿರ್ತೇವೆ. ನೀವು ಬಂದು ಉಗಿದು ಹೋಗ್ತಿರ್ತೀರಿ. ಆರೋಪದ ಶಾಯಿ ತೆಗೆದು ನಮಗೆ ಎಸೆಯುತ್ತಿರುತ್ತೀರಿ ಎಂದು ಫುಲ್ ಗರಂ ಅಗಿದ್ದಾರೆ.
ನೀವು ಆರೋಪ ಮಾಡುತ್ತಿರುತ್ತೀರಿ. ಅದರ ಹಿಂದೆ ಏನಾಗಿರುತ್ತದೆ ಅಂತ ಗೊತ್ತಿರಲ್ಲ ನಿಮಗೆ. ನೀವು ಮಾಡಿರುವ ಕಲೆಯನ್ನು ಅಳಿಸೋಕೆ ಬಹಳ ಸಮಯಬೇಕು. ಈ ರೀತಿ ಯಾರೂ ಮಾದಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯ ಬಿಜೆಪಿ ಕೆಲ ನಾಯಕರು ಹೊಂದಾಣಿಕೆ ರಾಜಕಾರಣದ ಬಗ್ಗೆ ಅರೋಪಿಸಿದ್ದರು. ಅಲ್ಲದೇ ಪಕ್ಷದ ವಿರುದ್ಧವೇ ಬಹಿರಂಗ ಹೇಳಿಕೆ ನೀಡಿದ್ದರು ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಇಂದು ತೀಕ್ಷ್ಣವಾಗಿ ಮಾತನಾಡಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…