BREAKING NEWS

ರಾಜಕಾರಣದಲ್ಲಿ ಕಷ್ಟ ಪಟ್ಟು ಬಿಳಿ ಶರ್ಟ್ ಹಾಕಿಕೊಂಡಿರ್ತೇವೆ ನೀವು ಬಂದು ಉಗಿದು ಹೋಗ್ತಿರ್ತೀರಿ : ಬಸವರಾಜ್ ಬೊಮ್ಮಾಯಿ ಅಕ್ರೋಶ

ಬೆಂಗಳೂರು : ಹೊಂದಾಣಿಕೆ ರಾಜಕಾರಣದ ಆರೋಪ ಮಾಡಿದವರ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಸಭೆಯಲ್ಲಿ ಕೆಂಡಾಮಂಡಲರಾದ ಘಟನೆ ನಡೆದಿದೆ.

ಪಕ್ಷದ ವಿರುದ್ಧ ಬಿಜೆಪಿ ನಾಯಕರೇ ಬಹಿರಂಗ ಹೇಳಿಕೆ ನೀಡಿತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ಬಿಜೆಪಿ ನಾಯಕರ ವಿವರಣೆ ಪಡೆಯಲಾಯಿತು. ಈ ವೇಳೆ ಹೊಂದಾಣಿಕೆ ರಾಜಕಾರಣದ ಬಗ್ಗೆ ಆರೋಪ ಮಾಡಿದವರ ವಿರುದ್ಧ ಗುಡುಗಿದ ಮಾಜಿ ಸಿಎಂ ಬೊಮ್ಮಾಯಿ, ರಾಜಕಾರಣದಲ್ಲಿ ಕಷ್ಟ ಪಟ್ಟು ಬಿಳಿ ಶರ್ಟ್ ಹಾಕಿಕೊಂಡಿರ್ತೇವೆ. ನೀವು ಬಂದು ಉಗಿದು ಹೋಗ್ತಿರ್ತೀರಿ. ಆರೋಪದ ಶಾಯಿ ತೆಗೆದು ನಮಗೆ ಎಸೆಯುತ್ತಿರುತ್ತೀರಿ ಎಂದು ಫುಲ್ ಗರಂ ಅಗಿದ್ದಾರೆ.
ನೀವು ಆರೋಪ ಮಾಡುತ್ತಿರುತ್ತೀರಿ. ಅದರ ಹಿಂದೆ ಏನಾಗಿರುತ್ತದೆ ಅಂತ ಗೊತ್ತಿರಲ್ಲ ನಿಮಗೆ. ನೀವು ಮಾಡಿರುವ ಕಲೆಯನ್ನು ಅಳಿಸೋಕೆ ಬಹಳ ಸಮಯಬೇಕು. ಈ ರೀತಿ ಯಾರೂ ಮಾದಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯ ಬಿಜೆಪಿ ಕೆಲ ನಾಯಕರು ಹೊಂದಾಣಿಕೆ ರಾಜಕಾರಣದ ಬಗ್ಗೆ ಅರೋಪಿಸಿದ್ದರು. ಅಲ್ಲದೇ ಪಕ್ಷದ ವಿರುದ್ಧವೇ ಬಹಿರಂಗ ಹೇಳಿಕೆ ನೀಡಿದ್ದರು ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಇಂದು ತೀಕ್ಷ್ಣವಾಗಿ ಮಾತನಾಡಿದ್ದಾರೆ.

lokesh

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

36 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago