ರಾಮನಾಥಪುರ: ಶ್ರೀಲಂಕಾ ನೌಕಾಪಡೆಯು ಭಾರತೀಯ ಮೀನುಗಾರರ ಮೇಲೆ ನಿರಂತರ ದಾಳಿ ನಡೆಸುತ್ತಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ “ದುರ್ಬಲವಾಗಿದೆ” ಎಂಬುದನ್ನು ತೋರಿಸುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಮೀನುಗಾರರ ಕಲ್ಯಾಣ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಟಾಲಿನ್, 1974ರಲ್ಲಿ ಪರಸ್ಪರ ಒಪ್ಪಂದದ ಮೂಲಕ ಶ್ರೀಲಂಕಾಕ್ಕೆ ಬಿಟ್ಟುಕೊಟ್ಟಿದ್ದ ಕಚ್ಚತೀವು ದ್ವೀಪವನ್ನು ಹಿಂಪಡೆಯುವುದೇ ಮೀನುಗಾರರ ಸಮಸ್ಯೆಗೆ ಶಾಶ್ವತ ಪರಿಹಾರ ಎಂದು ಪುನರುಚ್ಚರಿಸಿದ್ದಾರೆ.
ಆಡಳಿತಾರೂಢ ಡಿಎಂಕೆ ಅಧ್ಯಕ್ಷರಾಗಿರುವ ಸ್ಟಾಲಿನ್, ತಮ್ಮ ತಂದೆ ಮತ್ತು ದಿವಂಗತ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರು ಕಚ್ಚತೀವು ಭಾರತಕ್ಕೆ ಸೇರಿದ್ದು ಎಂದು ವರದಿ ನೀಡಿದ್ದರು ಎಂದರು.
1974 ರಲ್ಲಿ ಶ್ರೀಲಂಕಾಕ್ಕೆ ಕಚ್ಚತೀವು ದ್ವೀಪವನ್ನು ನೀಡಿದ್ದು ಇಂದಿರಾ ಗಾಂಧಿ ಸರ್ಕಾರ ಎಂದು ಪ್ರಧಾನಿ ಮೋದಿ ಅವರು ಹೇಳಿದ ಕೆಲವೇ ದಿನಗಳಲ್ಲಿ ತಮಿಳುನಾಡು ಮುಖ್ಯಮಂತ್ರಿ ದ್ವೀಪ ಹಿಂಪಡೆಯುವ ಹೇಳಿಕೆ ನೀಡಿದ್ದಾರೆ.
ಪ್ರಸ್ತುತ ಎನ್ಡಿಎ ಆಡಳಿತದಲ್ಲಿ ಲಂಕಾ ನೌಕಾಪಡೆಯಿಂದ ತಮಿಳುನಾಡು ಮೀನುಗಾರರ ಮೇಲೆ ದಾಳಿಗಳು ಹೆಚ್ಚುತ್ತಿವೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ.
ಶ್ರೀಲಂಕಾ ನೌಕಾಪಡೆಯಿಂದ ಭಾರತೀಯ ಮೀನುಗಾರರಿಗೆ ನಿರಂತರ ಕಿರುಕುಳ ಮತ್ತು ದಾಳಿಯನ್ನು ಮೀನುಗಾರರ ಸಮಾವೇಶ ಖಂಡಿಸಿದೆ.
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…