ರಾಮನಾಥಪುರ: ಶ್ರೀಲಂಕಾ ನೌಕಾಪಡೆಯು ಭಾರತೀಯ ಮೀನುಗಾರರ ಮೇಲೆ ನಿರಂತರ ದಾಳಿ ನಡೆಸುತ್ತಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ “ದುರ್ಬಲವಾಗಿದೆ” ಎಂಬುದನ್ನು ತೋರಿಸುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಮೀನುಗಾರರ ಕಲ್ಯಾಣ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಟಾಲಿನ್, 1974ರಲ್ಲಿ ಪರಸ್ಪರ ಒಪ್ಪಂದದ ಮೂಲಕ ಶ್ರೀಲಂಕಾಕ್ಕೆ ಬಿಟ್ಟುಕೊಟ್ಟಿದ್ದ ಕಚ್ಚತೀವು ದ್ವೀಪವನ್ನು ಹಿಂಪಡೆಯುವುದೇ ಮೀನುಗಾರರ ಸಮಸ್ಯೆಗೆ ಶಾಶ್ವತ ಪರಿಹಾರ ಎಂದು ಪುನರುಚ್ಚರಿಸಿದ್ದಾರೆ.
ಆಡಳಿತಾರೂಢ ಡಿಎಂಕೆ ಅಧ್ಯಕ್ಷರಾಗಿರುವ ಸ್ಟಾಲಿನ್, ತಮ್ಮ ತಂದೆ ಮತ್ತು ದಿವಂಗತ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರು ಕಚ್ಚತೀವು ಭಾರತಕ್ಕೆ ಸೇರಿದ್ದು ಎಂದು ವರದಿ ನೀಡಿದ್ದರು ಎಂದರು.
1974 ರಲ್ಲಿ ಶ್ರೀಲಂಕಾಕ್ಕೆ ಕಚ್ಚತೀವು ದ್ವೀಪವನ್ನು ನೀಡಿದ್ದು ಇಂದಿರಾ ಗಾಂಧಿ ಸರ್ಕಾರ ಎಂದು ಪ್ರಧಾನಿ ಮೋದಿ ಅವರು ಹೇಳಿದ ಕೆಲವೇ ದಿನಗಳಲ್ಲಿ ತಮಿಳುನಾಡು ಮುಖ್ಯಮಂತ್ರಿ ದ್ವೀಪ ಹಿಂಪಡೆಯುವ ಹೇಳಿಕೆ ನೀಡಿದ್ದಾರೆ.
ಪ್ರಸ್ತುತ ಎನ್ಡಿಎ ಆಡಳಿತದಲ್ಲಿ ಲಂಕಾ ನೌಕಾಪಡೆಯಿಂದ ತಮಿಳುನಾಡು ಮೀನುಗಾರರ ಮೇಲೆ ದಾಳಿಗಳು ಹೆಚ್ಚುತ್ತಿವೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ.
ಶ್ರೀಲಂಕಾ ನೌಕಾಪಡೆಯಿಂದ ಭಾರತೀಯ ಮೀನುಗಾರರಿಗೆ ನಿರಂತರ ಕಿರುಕುಳ ಮತ್ತು ದಾಳಿಯನ್ನು ಮೀನುಗಾರರ ಸಮಾವೇಶ ಖಂಡಿಸಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…