BREAKING NEWS

ರಾಟ್‌ವೀಲರ್‌, ಪಿಟ್‌ಬುಲ್‌ ಸೇರಿದಂತೆ 23 ತಳಿಗಳನ್ನು ನಿಷೇಧಿಸಿದ ಕೇಂದ್ರ!

ಅಮೇರಿಕನ್ ಬುಲ್‌ಡಾಗ್ಸ್, ರಾಟ್‌ವೀಲರ್ಸ್ ಮತ್ತು ಮ್ಯಾಸ್ಟಿಫ್ಸ್ ಸೇರಿದಂತೆ 23 ತಳಿಗಳ ಅಪಾಯಕಾರಿ ನಾಯಿಗಳ ಮಾರಾಟ ಮತ್ತು ಸಂತಾನೋತ್ಪತ್ತಿಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

ಪಶು ಸಂಗೋಪನಾ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿತವಾದ ತಜ್ಞರ ಸಮಿತಿಯು ಅಪಾಯಕಾರಿ ತಳಿ ನಾಯಿಗಳ ಆಮದನ್ನು ನಿಷೇಧಿಸುವಂತೆ ಶಿಫಾರಸು ಮಾಡಿದೆ.

ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪಿಇಟಿಯ) ಇಂಡಿಯಾದ ಮನವಿ ಮತ್ತು ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ರಿಟ್ ಅರ್ಜಿಯ ನಂತರ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಒ.ಪಿ.ಚೌಧರಿ ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಕಳುಹಿಸಿದ್ದು, ಅಪಾಯಕಾರಿ ತಳಿಗಳೆಂದು ಗುರುತಿಸಲಾದ ನಾಯಿಗಳ ಸಾಕಣೆ ಮತ್ತು ಮಾರಾಟವನ್ನು ನಿಷೇಧಿಸಬೇಕು ಎಂದು ಸ್ಥಳೀಯ ಸಂಸ್ಥೆಗಳು, ಪಶುಸಂಗೋಪನೆ ಇಲಾಖೆಗೆ ಒತ್ತಾಯಿಸಿದ್ದಾರೆ.

ಅಮೆರಿಕ, ಬ್ರಿಟನ್, ಜರ್ಮನಿ, ಡೆನ್ಮಾರ್ಕ್, ಸ್ಪೇನ್, ಕೆನಡಾ, ಇಟಲಿ ಮತ್ತು ಫ್ರಾನ್ಸ್ ಸೇರಿದಂತೆ 41 ದೇಶಗಳಲ್ಲಿ ಪಿಟ್‌ಬುಲ್ ಅನ್ನು ನಿಷೇಧಿಸಲಾಗಿದೆ.

ಅಪಾಯಕಾರಿ ತಳಿಗಳು: ಪಿಟ್‌ಬುಲ್ ಟೆರಿಯರ್‌ಗಳು, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್‌ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅರ್ಜೆಂಟಿನೋ, ಅಮೇರಿಕನ್ ಬುಲ್‌ಡಾಗ್, ಬೋರ್‌ಬೋಲ್, ಕಂಗಲ್, ಟಾರ್ನ್‌ಜಾಕ್, ಬ್ಯಾಂಡೋಗ್, ಸರ್ಪ್ಲಾನಿನಾಕ್, ಜಪಾನೀಸ್ ತೋಸಾ, ಅಕಿತಾ, ಮಾಸ್ಟಿಫ್ಸ್, ರಾಟ್‌ವೀಲರ್, ರೋಡೇಶಿಯನ್ ರಿಡ್ಜ್‌ಬ್ಯಾಕ್, ಮಾಸ್ಕೋಲ್ ಡೊಗ್‌ಬಾಗ್, ಮಾಸ್ಕೋಲ್ ಗಾರ್ಡ್‌ಬಾಗ್, ವಾರಿಯೊ, ಜರ್ಮನ್ ಶೆಫರ್ಡ್ ಇತ್ಯಾದಿ.

andolanait

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

5 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

9 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

15 mins ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

21 mins ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

9 hours ago