ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಂಪನಿಗಳಿಗೆ ಬುಧವಾರ ಮುಂಜಾನೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ನಗರದ ಸರ್ ಸಿ.ವಿ. ರಾಮನ್ ನಗರ, ಬಾಗಮನೆ ಟೆಕ್ ಪಾರ್ಕ್, ಹುಳಿಮಾವು ಮೊದಲಾದ ಕಡೆಗಳಲ್ಲಿ ದಾಳಿ ನಡೆದಿದೆ. ಸುಮಾರು 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ನಾನಾ ಕಡೆ ದಾಳಿ ಮಾಡಿದೆ.
ಹುಳಿಮಾವು ಸಮೀಪದ ಆಪಸ್ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿರುವ ಐಟಿ ಟೀಂ ಅಲ್ಲಿ ತಪಾಸಣೆಯನ್ನು ನಡೆಸುತ್ತಿದೆ. ಅಲ್ಲದೆ ಹಲವು ಕಡೆಗಳಲ್ಲಿ ದಾಳಿ ನಡೆದಿರುವ ಮಾಹಿತಿ ಇದೆ.ಆದಾಯ ತೆರಿಗೆ ಪಾವತಿಯಲ್ಲಿ ಕೆಲವು ಕಂಪನಿಗಳು ವಂಚನೆ ಮಾಡುತ್ತಿವೆ ಎಂಬುದನ್ನು ಕಂಡುಕೊಂಡಿರುವ ಅಧಿಕಾರಿಗಳು ಕಂಪನಿಯ ದಾಖಲೆ, ಕಡತಗಳ ಪರಿಶೀಲನೆಗಾಗಿ ಈ ದಾಳಿ ನಡೆಸಿವೆ. ತಂಡಗಳು ಕಂಪನಿಗಳ ಕಚೇರಿಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿವುದಾಗಿ ತಿಳಿದು ಬಂದಿದೆ.
ನಿನ್ನೆ ಮಂಗಳವಾರ ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ 62.05 ಕೋಟಿ ಮೌಲ್ಯದ ಸರ್ಕಾರಿ ಭೂಮಿ ಜಪ್ತಿ ಮಾಡಿಕೊಂಡಿದ್ದರು.
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…