ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಂಪನಿಗಳಿಗೆ ಬುಧವಾರ ಮುಂಜಾನೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ನಗರದ ಸರ್ ಸಿ.ವಿ. ರಾಮನ್ ನಗರ, ಬಾಗಮನೆ ಟೆಕ್ ಪಾರ್ಕ್, ಹುಳಿಮಾವು ಮೊದಲಾದ ಕಡೆಗಳಲ್ಲಿ ದಾಳಿ ನಡೆದಿದೆ. ಸುಮಾರು 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ನಾನಾ ಕಡೆ ದಾಳಿ ಮಾಡಿದೆ.
ಹುಳಿಮಾವು ಸಮೀಪದ ಆಪಸ್ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿರುವ ಐಟಿ ಟೀಂ ಅಲ್ಲಿ ತಪಾಸಣೆಯನ್ನು ನಡೆಸುತ್ತಿದೆ. ಅಲ್ಲದೆ ಹಲವು ಕಡೆಗಳಲ್ಲಿ ದಾಳಿ ನಡೆದಿರುವ ಮಾಹಿತಿ ಇದೆ.ಆದಾಯ ತೆರಿಗೆ ಪಾವತಿಯಲ್ಲಿ ಕೆಲವು ಕಂಪನಿಗಳು ವಂಚನೆ ಮಾಡುತ್ತಿವೆ ಎಂಬುದನ್ನು ಕಂಡುಕೊಂಡಿರುವ ಅಧಿಕಾರಿಗಳು ಕಂಪನಿಯ ದಾಖಲೆ, ಕಡತಗಳ ಪರಿಶೀಲನೆಗಾಗಿ ಈ ದಾಳಿ ನಡೆಸಿವೆ. ತಂಡಗಳು ಕಂಪನಿಗಳ ಕಚೇರಿಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿವುದಾಗಿ ತಿಳಿದು ಬಂದಿದೆ.
ನಿನ್ನೆ ಮಂಗಳವಾರ ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ 62.05 ಕೋಟಿ ಮೌಲ್ಯದ ಸರ್ಕಾರಿ ಭೂಮಿ ಜಪ್ತಿ ಮಾಡಿಕೊಂಡಿದ್ದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…