ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇ ನಲ್ಲಿ ಅಪಘಾತಗಳು ಹೆಚ್ಚಾಗಿರುವುದರ ಬಗ್ಗೆ ಪರಿಶೀಲನೆ ನಡೆಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ವಿಶೇಷ ಸಮಿತಿಯೊಂದನ್ನು ರಚನೆ ಮಾಡಿದೆ.
ಮೂವರು ತಜ್ಞರನ್ನೊಳಗೊಂಡ ಸಮಿತಿ ಇದಾಗಿದೆ. ರಸ್ತೆ ಸುರಕ್ಷತೆ ಸಲಹೆಗಾರ ಸುದರ್ಶನ್ ಕೆ.ಪೊಪ್ತಿ, ಎನ್ಹೆಚ್ಎಐ ಉಪ ವ್ಯವಸ್ಥಾಪಕ ಪ್ರವೀಣ್ ಕುಮಾರ್, ಜೈವರ್ಧನ್ ಸಿಂಗ್ ಅವರು ಸಮಿತಿಯ ಸದಸ್ಯರಾಗಿದ್ದಾರೆ.
ಈ ಸಮಿತಿಯು ಜುಲೈ 20 ರೊಳಗೆ ಎಕ್ಸ್ಪ್ರೆಸ್ ಹೈವೇಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿ 10 ದಿನದೊಳಗೆ ವರದಿ ನೀಡುವಂತೆ ಪ್ರಾಧಿಕಾರದ ರಸ್ತೆ ಸುರಕ್ಷತೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುನೀಲ್ ಜಿಂದಾಲ್ ಸಮಿತಿಗೆ ಸೂಚನೆ ನೀಡಿದ್ದಾರೆ.
ಕಳೆದ 9 ತಿಂಗಳಿನಲ್ಲಿ ಎಕ್ಸ್ಪ್ರೆಸ್ ಹೈವೇಯಲ್ಲಿ 550ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳಲ್ಲಿ ಮೃತಪಟ್ಟವರ ಬಗ್ಗೆ ಮಾಹಿತಿ ನೀಡುವಂತೆಯೂ ಪ್ರಾಧಿಕಾರ ಆದೇಶಿಸಿದೆ.
ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…
ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…
ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…
ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…
ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…