BREAKING NEWS

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆ

ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ಕಮರ್ಷಿಯಲ್‌ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 7 ರೂ. ಹೆಚ್ಚಿಸಿವೆ. ಮೂರು ತಿಂಗಳ ಬಳಿಕ ಕಮರ್ಷಿಯಲ್‌ ಬಳಕೆ ಸಿಲಿಂಡರ್‌ ಬೆಲೆ ಏರಿಕೆಯಾಗಿದೆ.

19 ಕೆಜಿ ಸಿಲಿಂಡರ್‌ ಬೆಲೆಯಲ್ಲಿ 7 ರೂಪಾಯಿ ಏರಿಕೆಯಾಗಿದೆ. ಪ್ರತಿ ಸಿಲಿಂಡರ್‌ಗೆ 1,773 ರೂ. ಇದ್ದದ್ದು, ಈಗ 1,780 ರೂ.ಗೆ ಹೆಚ್ಚಳವಾಗಿದೆ. ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (ಬಿಪಿಸಿಎಲ್), ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (ಎಚ್‌ಪಿಸಿಎಲ್), ಎಲ್ಲಾ ಸರ್ಕಾರಿ ಸ್ವಾಮ್ಯದ ಕಂಪನಿಗಳು ಹಿಂದಿನ ತಿಂಗಳ ಸರಾಸರಿ ಅಂತರರಾಷ್ಟ್ರೀಯ ಬೆಲೆಗಳನ್ನು ಆಧರಿಸಿ ಅಡುಗೆ ಅನಿಲದ ಬೆಲೆಗಳನ್ನು ಮಾಸಿಕವಾಗಿ ಸರಿಹೊಂದಿಸುತ್ತವೆ.

ಈ ವರ್ಷದ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಸತತ ಕಡಿತದ ನಂತರ ಕಮರ್ಷಿಯಲ್‌ ಎಲ್‌ಪಿಜಿ ಸಿಲಿಂಡರ್‌ಗೆ ಮೊದಲ ಬೆಲೆ ಏರಿಕೆಯಾಗಿದೆ.

ಮೇ ತಿಂಗಳಲ್ಲಿ, ಕಮರ್ಷಿಯಲ್‌ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ದೆಹಲಿಯಲ್ಲಿ 171.5 ರೂ.ನಷ್ಟು ಕಡಿಮೆ ಮಾಡಿತ್ತು. ಹೀಗಾಗಿ ಪ್ರತಿ ಸಿಲಿಂಡರ್‌ ಬೆಲೆ 2,028 ರೂ. ಇದ್ದದ್ದು, 1,856.5 ರೂ.ಗೆ ಆಗಿತ್ತು.

lokesh

Recent Posts

ನಾಳೆಯಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಈ ಬಾರಿ ಏನೆಲ್ಲಾ ವಿಶೇಷ

ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…

3 mins ago

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

37 mins ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

2 hours ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

2 hours ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

2 hours ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

3 hours ago