ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನಒಳಹರಿವು 11,800 ಕ್ಯೂಸೆಕ್ಗೆ ಏರಿಕೆಯಾಗಿದೆ.
ಸಾಕಷ್ಟು ಆತಂಕ ಮೂಡಿಸಿದ್ದ ಕೆಆರ್ಎಸ್ನ ನೀರಿನ ಮಟ್ಟ ಇದೀಗ 2 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹಿನ್ನೆಲೆ ಡ್ಯಾಂಗೆ ಹರಿದು ಬರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ನಿನ್ನೆ ಬೆಳಗ್ಗೆ 5,811 ಕ್ಯೂಸೆಕ್ ಇದ್ದ ಒಳ ಹರಿವು ಇಂದು ಬೆಳಗ್ಗೆ 11,800 ಕ್ಯೂಸೆಕ್ ಏರಿಕೆಯಾಗಿದೆ.
ಒಳ ಹರಿವು ಹೆಚ್ಚಳದಿಂದ ಮತ್ತೆ ಕೆಆರ್ಎಸ್ ಡ್ಯಾಂ ನೀರಿನ ಮಟ್ಟ 100 ಅಡಿ ಗಡಿ ತಲುಪಿದೆ. ಸದ್ಯ 99.50 ಅಡಿಗೆ ಕೆಆರ್ಎಸ್ ನೀರಿನ ಮಟ್ಟ ಏರಿಕೆಯಾಗಿದೆ. ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ರೈತರಲ್ಲಿ ಸ್ವಲ್ಪ ಸಮಾಧಾನ ಮೂಡಿದೆ. ಮತ್ತೊಂದೆಡೆ ತಮಿಳುನಾಡಿಗೆ ನೀರು ಬಿಡುಗಡೆ ಮುಂದುವರಿಕೆಯಾಗಿದ್ದು, ಇಂದು 1,592 ಕ್ಯೂಸೆಕ್ ನೀರು ತಮಿಳುನಾಡಿಗೆ ಹೋಗುತ್ತಿದೆ.
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…