BREAKING NEWS

ಕೆಆರ್‌ಎಸ್ ಜಲಾಶಯದ ಒಳಹರಿವು ಹೆಚ್ಚಳ : 11.800 ಕ್ಯೂಸೆಕ್‌ ಏರಿಕೆ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನಒಳಹರಿವು 11,800 ಕ್ಯೂಸೆಕ್‌ಗೆ ಏರಿಕೆಯಾಗಿದೆ.

ಸಾಕಷ್ಟು ಆತಂಕ ಮೂಡಿಸಿದ್ದ ಕೆಆರ್‌ಎಸ್‌ನ ನೀರಿನ ಮಟ್ಟ ಇದೀಗ 2 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹಿನ್ನೆಲೆ ಡ್ಯಾಂಗೆ ಹರಿದು ಬರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ನಿನ್ನೆ ಬೆಳಗ್ಗೆ 5,811 ಕ್ಯೂಸೆಕ್ ಇದ್ದ ಒಳ ಹರಿವು ಇಂದು ಬೆಳಗ್ಗೆ 11,800 ಕ್ಯೂಸೆಕ್ ಏರಿಕೆಯಾಗಿದೆ.

ಒಳ ಹರಿವು ಹೆಚ್ಚಳದಿಂದ ಮತ್ತೆ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 100 ಅಡಿ ಗಡಿ ತಲುಪಿದೆ. ಸದ್ಯ 99.50 ಅಡಿಗೆ ಕೆಆರ್‌ಎಸ್ ನೀರಿನ ಮಟ್ಟ ಏರಿಕೆಯಾಗಿದೆ. ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ರೈತರಲ್ಲಿ ಸ್ವಲ್ಪ ಸಮಾಧಾನ ಮೂಡಿದೆ. ಮತ್ತೊಂದೆಡೆ ತಮಿಳುನಾಡಿಗೆ ನೀರು ಬಿಡುಗಡೆ ಮುಂದುವರಿಕೆಯಾಗಿದ್ದು, ಇಂದು 1,592 ಕ್ಯೂಸೆಕ್ ನೀರು ತಮಿಳುನಾಡಿಗೆ ಹೋಗುತ್ತಿದೆ.

lokesh

Recent Posts

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

17 mins ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

26 mins ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

4 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

9 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

9 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

10 hours ago