ನವದೆಹಲಿ : ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಕೇಂದ್ರ ಸರ್ಕಾರವು ಸತತ ಮೂರು ತ್ರೈಮಾಸಿಕಗಳಲ್ಲಿ ಹೆಚ್ಚು ಮಾಡಿರುವ ಪರಿಣಾಮವಾಗಿ, ಅಂಚೆ ಕಚೇರಿ ಅವಧಿ ಠೇವಣಿಗಳು ಮತ್ತೆ ಸ್ಪರ್ಧಾತ್ಮಕವಾಗಿ ಕಾಣುತ್ತಿವೆ. ಈ ಉಳಿತಾಯ ಯೋಜನೆಗಳು ಬಡ್ಡಿ ದರ ಏರಿಕೆಗೂ ಮೊದಲು ಬ್ಯಾಂಕ್ ಎಫ್.ಡಿ.ಗಳಿಗಿಂತ ಕಡಿಮೆ ಲಾಭ ತಂದುಕೊಡುತ್ತಿದ್ದವು.
ಅಂಚೆ ಕಚೇರಿಯ ಎರಡು ವರ್ಷಗಳ ಅವಧಿ ಠೇವಣಿಗೆ ಈಗ ಶೇ 6.9ರಷ್ಟು ಬಡ್ಡಿ ಸಿಗುತ್ತಿದೆ. ಇದೇ ಅವಧಿಯ ಬಹುತೇಕ ಬ್ಯಾಂಕ್ ಎಫ್.ಡಿ.ಗಳು ಈಗ ಇಷ್ಟೇ ಪ್ರಮಾಣದ ಬಡ್ಡಿ ನೀಡುತ್ತಿವೆ.
ಆರ್ಬಿಐ ರೆಪೊ ದರವನ್ನು 2022ರ ಮೇ ತಿಂಗಳಿನಿಂದ ಹೆಚ್ಚಿಸುತ್ತಿದೆ. ಬ್ಯಾಂಕ್ಗಳು ತಮ್ಮಲ್ಲಿನ ಠೇವಣಿಯನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಕಳೆದ ಆರ್ಥಿಕ ವರ್ಷದ ದ್ವಿತೀಯಾರ್ಧದಲ್ಲಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಹೆಚ್ಚಿಸುವ ಕೆಲಸಕ್ಕೆ ಚುರುಕು ನೀಡಿದವು.
ಕೇಂದ್ರ ಸರ್ಕಾರವು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವನ್ನು ಅಕ್ಟೋಬರ್–ಡಿಸೆಂಬರ್ ತ್ರೈಮಾಸಿಕದಲ್ಲಿ ಗರಿಷ್ಠ ಶೇ 0.30ರವರೆಗೆ, ಜನವರಿ–
ಮಾರ್ಚ್ ತ್ರೈಮಾಸಿಕದಲ್ಲಿ ಗರಿಷ್ಠ ಶೇ 1.10ರವರೆಗೆ ಹಾಗೂ ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್–ಜೂನ್ ತ್ರೈಮಾಸಿಕಕ್ಕೆ ಗರಿಷ್ಠ ಶೇ 0.70ರವರೆಗೆ ಹೆಚ್ಚಿಸಿದೆ. ಇದಕ್ಕೂ ಮೊದಲು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವು ಸತತ ಒಂಬತ್ತು ತ್ರೈಮಾಸಿಕಗಳಲ್ಲಿ ಯಾವ ಬದಲಾವಣೆಯನ್ನೂ ಕಂಡಿರಲಿಲ್ಲ.
ಆರ್ಬಿಐ ಅಂದಾಜಿನ ಅನ್ವಯ 1 ವರ್ಷದಿಂದ 2 ವರ್ಷಗಳವರೆಗಿನ, ಬ್ಯಾಂಕ್ ರಿಟೇಲ್ ಠೇವಣಿಗಳ ಮೇಲಿನ ಸರಾಸರಿ ಬಡ್ಡಿ ದರವು ಈಗ ಶೇ 6.9ರಷ್ಟು ಇದೆ. ಇದು 2022ರ ಸೆಪ್ಟೆಂಬರ್ನಲ್ಲಿ ಶೇ 5.8ರಷ್ಟು ಇತ್ತು.
ಮೂರು ವರ್ಷಗಳ ಅವಧಿಯ ಅಂಚೆ ಕಚೇರಿ ಅವಧಿ ಠೇವಣಿಯ ಬಡ್ಡಿದರವು ಶೇ 7ಕ್ಕೆ ತಲುಪಿದೆ. ಇದು ಈ ಮೊದಲು ಶೇ 5.5ರಷ್ಟು ಇತ್ತು. ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಎಸ್ಬಿಐ, ಎರಡು ವರ್ಷಕ್ಕಿಂತ ಹೆಚ್ಚಿನ ಹಾಗೂ ಮೂರು ವರ್ಷಕ್ಕಿಂತ ಕಡಿಮೆ ಅವಧಿಯ ಠೇವಣಿಗೆ ಶೇ 7ರಷ್ಟು ಬಡ್ಡಿ ನೀಡುತ್ತಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…