ನವದೆಹಲಿ : ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಕೇಂದ್ರ ಸರ್ಕಾರವು ಸತತ ಮೂರು ತ್ರೈಮಾಸಿಕಗಳಲ್ಲಿ ಹೆಚ್ಚು ಮಾಡಿರುವ ಪರಿಣಾಮವಾಗಿ, ಅಂಚೆ ಕಚೇರಿ ಅವಧಿ ಠೇವಣಿಗಳು ಮತ್ತೆ ಸ್ಪರ್ಧಾತ್ಮಕವಾಗಿ ಕಾಣುತ್ತಿವೆ. ಈ ಉಳಿತಾಯ ಯೋಜನೆಗಳು ಬಡ್ಡಿ ದರ ಏರಿಕೆಗೂ ಮೊದಲು ಬ್ಯಾಂಕ್ ಎಫ್.ಡಿ.ಗಳಿಗಿಂತ ಕಡಿಮೆ ಲಾಭ ತಂದುಕೊಡುತ್ತಿದ್ದವು.
ಅಂಚೆ ಕಚೇರಿಯ ಎರಡು ವರ್ಷಗಳ ಅವಧಿ ಠೇವಣಿಗೆ ಈಗ ಶೇ 6.9ರಷ್ಟು ಬಡ್ಡಿ ಸಿಗುತ್ತಿದೆ. ಇದೇ ಅವಧಿಯ ಬಹುತೇಕ ಬ್ಯಾಂಕ್ ಎಫ್.ಡಿ.ಗಳು ಈಗ ಇಷ್ಟೇ ಪ್ರಮಾಣದ ಬಡ್ಡಿ ನೀಡುತ್ತಿವೆ.
ಆರ್ಬಿಐ ರೆಪೊ ದರವನ್ನು 2022ರ ಮೇ ತಿಂಗಳಿನಿಂದ ಹೆಚ್ಚಿಸುತ್ತಿದೆ. ಬ್ಯಾಂಕ್ಗಳು ತಮ್ಮಲ್ಲಿನ ಠೇವಣಿಯನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಕಳೆದ ಆರ್ಥಿಕ ವರ್ಷದ ದ್ವಿತೀಯಾರ್ಧದಲ್ಲಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಹೆಚ್ಚಿಸುವ ಕೆಲಸಕ್ಕೆ ಚುರುಕು ನೀಡಿದವು.
ಕೇಂದ್ರ ಸರ್ಕಾರವು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವನ್ನು ಅಕ್ಟೋಬರ್–ಡಿಸೆಂಬರ್ ತ್ರೈಮಾಸಿಕದಲ್ಲಿ ಗರಿಷ್ಠ ಶೇ 0.30ರವರೆಗೆ, ಜನವರಿ–
ಮಾರ್ಚ್ ತ್ರೈಮಾಸಿಕದಲ್ಲಿ ಗರಿಷ್ಠ ಶೇ 1.10ರವರೆಗೆ ಹಾಗೂ ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್–ಜೂನ್ ತ್ರೈಮಾಸಿಕಕ್ಕೆ ಗರಿಷ್ಠ ಶೇ 0.70ರವರೆಗೆ ಹೆಚ್ಚಿಸಿದೆ. ಇದಕ್ಕೂ ಮೊದಲು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವು ಸತತ ಒಂಬತ್ತು ತ್ರೈಮಾಸಿಕಗಳಲ್ಲಿ ಯಾವ ಬದಲಾವಣೆಯನ್ನೂ ಕಂಡಿರಲಿಲ್ಲ.
ಆರ್ಬಿಐ ಅಂದಾಜಿನ ಅನ್ವಯ 1 ವರ್ಷದಿಂದ 2 ವರ್ಷಗಳವರೆಗಿನ, ಬ್ಯಾಂಕ್ ರಿಟೇಲ್ ಠೇವಣಿಗಳ ಮೇಲಿನ ಸರಾಸರಿ ಬಡ್ಡಿ ದರವು ಈಗ ಶೇ 6.9ರಷ್ಟು ಇದೆ. ಇದು 2022ರ ಸೆಪ್ಟೆಂಬರ್ನಲ್ಲಿ ಶೇ 5.8ರಷ್ಟು ಇತ್ತು.
ಮೂರು ವರ್ಷಗಳ ಅವಧಿಯ ಅಂಚೆ ಕಚೇರಿ ಅವಧಿ ಠೇವಣಿಯ ಬಡ್ಡಿದರವು ಶೇ 7ಕ್ಕೆ ತಲುಪಿದೆ. ಇದು ಈ ಮೊದಲು ಶೇ 5.5ರಷ್ಟು ಇತ್ತು. ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಎಸ್ಬಿಐ, ಎರಡು ವರ್ಷಕ್ಕಿಂತ ಹೆಚ್ಚಿನ ಹಾಗೂ ಮೂರು ವರ್ಷಕ್ಕಿಂತ ಕಡಿಮೆ ಅವಧಿಯ ಠೇವಣಿಗೆ ಶೇ 7ರಷ್ಟು ಬಡ್ಡಿ ನೀಡುತ್ತಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…