BREAKING NEWS

ಅಂಚೆ ಉಳಿತಾಯ ಯೋಜನೆಗೆ ಹೆಚ್ಚಿದ ಆಕರ್ಷಣೆ : ಬಡ್ಡಿ ದರ ಸತತ ಏರಿಕೆಯ ಪರಿಣಾಮ

ನವದೆಹಲಿ : ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಕೇಂದ್ರ ಸರ್ಕಾರವು ಸತತ ಮೂರು ತ್ರೈಮಾಸಿಕಗಳಲ್ಲಿ ಹೆಚ್ಚು ಮಾಡಿರುವ ಪರಿಣಾಮವಾಗಿ, ಅಂಚೆ ಕಚೇರಿ ಅವಧಿ ಠೇವಣಿಗಳು ಮತ್ತೆ ಸ್ಪರ್ಧಾತ್ಮಕವಾಗಿ ಕಾಣುತ್ತಿವೆ. ಈ ಉಳಿತಾಯ ಯೋಜನೆಗಳು ಬಡ್ಡಿ ದರ ಏರಿಕೆಗೂ ಮೊದಲು ಬ್ಯಾಂಕ್‌ ಎಫ್‌.ಡಿ.ಗಳಿಗಿಂತ ಕಡಿಮೆ ಲಾಭ ತಂದುಕೊಡುತ್ತಿದ್ದವು.

ಅಂಚೆ ಕಚೇರಿಯ ಎರಡು ವರ್ಷಗಳ ಅವಧಿ ಠೇವಣಿಗೆ ಈಗ ಶೇ 6.9ರಷ್ಟು ಬಡ್ಡಿ ಸಿಗುತ್ತಿದೆ. ಇದೇ ಅವಧಿಯ ಬಹುತೇಕ ಬ್ಯಾಂಕ್‌ ಎಫ್‌.ಡಿ.ಗಳು ಈಗ ಇಷ್ಟೇ ಪ್ರಮಾಣದ ಬಡ್ಡಿ ನೀಡುತ್ತಿವೆ.

ಆರ್‌ಬಿಐ ರೆಪೊ ದರವನ್ನು 2022ರ ಮೇ ತಿಂಗಳಿನಿಂದ ಹೆಚ್ಚಿಸುತ್ತಿದೆ. ಬ್ಯಾಂಕ್‌ಗಳು ತಮ್ಮಲ್ಲಿನ ಠೇವಣಿಯನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಕಳೆದ ಆರ್ಥಿಕ ವರ್ಷದ ದ್ವಿತೀಯಾರ್ಧದಲ್ಲಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಹೆಚ್ಚಿಸುವ ಕೆಲಸಕ್ಕೆ ಚುರುಕು ನೀಡಿದವು.

ಕೇಂದ್ರ ಸರ್ಕಾರವು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವನ್ನು ಅಕ್ಟೋಬರ್–ಡಿಸೆಂಬರ್ ತ್ರೈಮಾಸಿಕದಲ್ಲಿ ಗರಿಷ್ಠ ಶೇ 0.30ರವರೆಗೆ, ಜನವರಿ–

ಮಾರ್ಚ್‌ ತ್ರೈಮಾಸಿಕದಲ್ಲಿ ಗರಿಷ್ಠ ಶೇ 1.10ರವರೆಗೆ ಹಾಗೂ ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌–ಜೂನ್‌ ತ್ರೈಮಾಸಿಕಕ್ಕೆ ಗರಿಷ್ಠ ಶೇ 0.70ರವರೆಗೆ ಹೆಚ್ಚಿಸಿದೆ. ಇದಕ್ಕೂ ಮೊದಲು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವು ಸತತ ಒಂಬತ್ತು ತ್ರೈಮಾಸಿಕಗಳಲ್ಲಿ ಯಾವ ಬದಲಾವಣೆಯನ್ನೂ ಕಂಡಿರಲಿಲ್ಲ.

ಆರ್‌ಬಿಐ ಅಂದಾಜಿನ ಅನ್ವಯ 1 ವರ್ಷದಿಂದ 2 ವರ್ಷಗಳವರೆಗಿನ, ಬ್ಯಾಂಕ್‌ ರಿಟೇಲ್‌ ಠೇವಣಿಗಳ ಮೇಲಿನ ಸರಾಸರಿ ಬಡ್ಡಿ ದರವು ಈಗ ಶೇ 6.9ರಷ್ಟು ಇದೆ. ಇದು 2022ರ ಸೆಪ್ಟೆಂಬರ್‌ನಲ್ಲಿ ಶೇ 5.8ರಷ್ಟು ಇತ್ತು.

ಮೂರು ವರ್ಷಗಳ ಅವಧಿಯ ಅಂಚೆ ಕಚೇರಿ ಅವಧಿ ಠೇವಣಿಯ ಬಡ್ಡಿದರವು ಶೇ 7ಕ್ಕೆ ತಲುಪಿದೆ. ಇದು ಈ ಮೊದಲು ಶೇ 5.5ರಷ್ಟು ಇತ್ತು. ದೇಶದ ಅತಿದೊಡ್ಡ ಬ್ಯಾಂಕ್‌ ಆಗಿರುವ ಎಸ್‌ಬಿಐ, ಎರಡು ವರ್ಷಕ್ಕಿಂತ ಹೆಚ್ಚಿನ ಹಾಗೂ ಮೂರು ವರ್ಷಕ್ಕಿಂತ ಕಡಿಮೆ ಅವಧಿಯ ಠೇವಣಿಗೆ ಶೇ 7ರಷ್ಟು ಬಡ್ಡಿ ನೀಡುತ್ತಿದೆ.

 

lokesh

Recent Posts

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

18 mins ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

44 mins ago

ನಂದಿನ ರಾಯಭಾರಿಯಾಗಿ ಸುಧಾರಾಣಿ

ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…

50 mins ago

ನಾಳೆ ಭಾರತ ಬಂದ್‌ : ಶಾಲಾ, ಕಾಲೇಜು ಬಂದ್? ಏನಿರುತ್ತೇ, ಏನಿರಲ್ಲ?

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ.…

1 hour ago

ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ ; ವಂದೇ ಮಾತರಂಗೂ ಶಿಷ್ಟಾಚಾರ ಗೌರವ!

ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…

2 hours ago

ವಿದ್ಯಾರ್ಥಿಗಳು ಹೊಸ ಹೊಸ ವಿಷಯಗಳ ಕಡೆ ಗಮನಹರಿಸಿ : ಕುಲಪತಿ ಲೋಕನಾಥ್‌ ಸಲಹೆ

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…

2 hours ago