ನವದೆಹಲಿ : ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಕೇಂದ್ರ ಸರ್ಕಾರವು ಸತತ ಮೂರು ತ್ರೈಮಾಸಿಕಗಳಲ್ಲಿ ಹೆಚ್ಚು ಮಾಡಿರುವ ಪರಿಣಾಮವಾಗಿ, ಅಂಚೆ ಕಚೇರಿ ಅವಧಿ ಠೇವಣಿಗಳು ಮತ್ತೆ ಸ್ಪರ್ಧಾತ್ಮಕವಾಗಿ ಕಾಣುತ್ತಿವೆ. ಈ ಉಳಿತಾಯ ಯೋಜನೆಗಳು ಬಡ್ಡಿ ದರ ಏರಿಕೆಗೂ ಮೊದಲು ಬ್ಯಾಂಕ್ ಎಫ್.ಡಿ.ಗಳಿಗಿಂತ ಕಡಿಮೆ ಲಾಭ ತಂದುಕೊಡುತ್ತಿದ್ದವು.
ಅಂಚೆ ಕಚೇರಿಯ ಎರಡು ವರ್ಷಗಳ ಅವಧಿ ಠೇವಣಿಗೆ ಈಗ ಶೇ 6.9ರಷ್ಟು ಬಡ್ಡಿ ಸಿಗುತ್ತಿದೆ. ಇದೇ ಅವಧಿಯ ಬಹುತೇಕ ಬ್ಯಾಂಕ್ ಎಫ್.ಡಿ.ಗಳು ಈಗ ಇಷ್ಟೇ ಪ್ರಮಾಣದ ಬಡ್ಡಿ ನೀಡುತ್ತಿವೆ.
ಆರ್ಬಿಐ ರೆಪೊ ದರವನ್ನು 2022ರ ಮೇ ತಿಂಗಳಿನಿಂದ ಹೆಚ್ಚಿಸುತ್ತಿದೆ. ಬ್ಯಾಂಕ್ಗಳು ತಮ್ಮಲ್ಲಿನ ಠೇವಣಿಯನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಕಳೆದ ಆರ್ಥಿಕ ವರ್ಷದ ದ್ವಿತೀಯಾರ್ಧದಲ್ಲಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಹೆಚ್ಚಿಸುವ ಕೆಲಸಕ್ಕೆ ಚುರುಕು ನೀಡಿದವು.
ಕೇಂದ್ರ ಸರ್ಕಾರವು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವನ್ನು ಅಕ್ಟೋಬರ್–ಡಿಸೆಂಬರ್ ತ್ರೈಮಾಸಿಕದಲ್ಲಿ ಗರಿಷ್ಠ ಶೇ 0.30ರವರೆಗೆ, ಜನವರಿ–
ಮಾರ್ಚ್ ತ್ರೈಮಾಸಿಕದಲ್ಲಿ ಗರಿಷ್ಠ ಶೇ 1.10ರವರೆಗೆ ಹಾಗೂ ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್–ಜೂನ್ ತ್ರೈಮಾಸಿಕಕ್ಕೆ ಗರಿಷ್ಠ ಶೇ 0.70ರವರೆಗೆ ಹೆಚ್ಚಿಸಿದೆ. ಇದಕ್ಕೂ ಮೊದಲು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವು ಸತತ ಒಂಬತ್ತು ತ್ರೈಮಾಸಿಕಗಳಲ್ಲಿ ಯಾವ ಬದಲಾವಣೆಯನ್ನೂ ಕಂಡಿರಲಿಲ್ಲ.
ಆರ್ಬಿಐ ಅಂದಾಜಿನ ಅನ್ವಯ 1 ವರ್ಷದಿಂದ 2 ವರ್ಷಗಳವರೆಗಿನ, ಬ್ಯಾಂಕ್ ರಿಟೇಲ್ ಠೇವಣಿಗಳ ಮೇಲಿನ ಸರಾಸರಿ ಬಡ್ಡಿ ದರವು ಈಗ ಶೇ 6.9ರಷ್ಟು ಇದೆ. ಇದು 2022ರ ಸೆಪ್ಟೆಂಬರ್ನಲ್ಲಿ ಶೇ 5.8ರಷ್ಟು ಇತ್ತು.
ಮೂರು ವರ್ಷಗಳ ಅವಧಿಯ ಅಂಚೆ ಕಚೇರಿ ಅವಧಿ ಠೇವಣಿಯ ಬಡ್ಡಿದರವು ಶೇ 7ಕ್ಕೆ ತಲುಪಿದೆ. ಇದು ಈ ಮೊದಲು ಶೇ 5.5ರಷ್ಟು ಇತ್ತು. ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಎಸ್ಬಿಐ, ಎರಡು ವರ್ಷಕ್ಕಿಂತ ಹೆಚ್ಚಿನ ಹಾಗೂ ಮೂರು ವರ್ಷಕ್ಕಿಂತ ಕಡಿಮೆ ಅವಧಿಯ ಠೇವಣಿಗೆ ಶೇ 7ರಷ್ಟು ಬಡ್ಡಿ ನೀಡುತ್ತಿದೆ.
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…
ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…
ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…
ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…
ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ: ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…
ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…