ನವದೆಹಲಿ : ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಕೇಂದ್ರ ಸರ್ಕಾರವು ಸತತ ಮೂರು ತ್ರೈಮಾಸಿಕಗಳಲ್ಲಿ ಹೆಚ್ಚು ಮಾಡಿರುವ ಪರಿಣಾಮವಾಗಿ, ಅಂಚೆ ಕಚೇರಿ ಅವಧಿ ಠೇವಣಿಗಳು ಮತ್ತೆ ಸ್ಪರ್ಧಾತ್ಮಕವಾಗಿ ಕಾಣುತ್ತಿವೆ. ಈ ಉಳಿತಾಯ ಯೋಜನೆಗಳು ಬಡ್ಡಿ ದರ ಏರಿಕೆಗೂ ಮೊದಲು ಬ್ಯಾಂಕ್ ಎಫ್.ಡಿ.ಗಳಿಗಿಂತ ಕಡಿಮೆ ಲಾಭ ತಂದುಕೊಡುತ್ತಿದ್ದವು.
ಅಂಚೆ ಕಚೇರಿಯ ಎರಡು ವರ್ಷಗಳ ಅವಧಿ ಠೇವಣಿಗೆ ಈಗ ಶೇ 6.9ರಷ್ಟು ಬಡ್ಡಿ ಸಿಗುತ್ತಿದೆ. ಇದೇ ಅವಧಿಯ ಬಹುತೇಕ ಬ್ಯಾಂಕ್ ಎಫ್.ಡಿ.ಗಳು ಈಗ ಇಷ್ಟೇ ಪ್ರಮಾಣದ ಬಡ್ಡಿ ನೀಡುತ್ತಿವೆ.
ಆರ್ಬಿಐ ರೆಪೊ ದರವನ್ನು 2022ರ ಮೇ ತಿಂಗಳಿನಿಂದ ಹೆಚ್ಚಿಸುತ್ತಿದೆ. ಬ್ಯಾಂಕ್ಗಳು ತಮ್ಮಲ್ಲಿನ ಠೇವಣಿಯನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಕಳೆದ ಆರ್ಥಿಕ ವರ್ಷದ ದ್ವಿತೀಯಾರ್ಧದಲ್ಲಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಹೆಚ್ಚಿಸುವ ಕೆಲಸಕ್ಕೆ ಚುರುಕು ನೀಡಿದವು.
ಕೇಂದ್ರ ಸರ್ಕಾರವು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವನ್ನು ಅಕ್ಟೋಬರ್–ಡಿಸೆಂಬರ್ ತ್ರೈಮಾಸಿಕದಲ್ಲಿ ಗರಿಷ್ಠ ಶೇ 0.30ರವರೆಗೆ, ಜನವರಿ–
ಮಾರ್ಚ್ ತ್ರೈಮಾಸಿಕದಲ್ಲಿ ಗರಿಷ್ಠ ಶೇ 1.10ರವರೆಗೆ ಹಾಗೂ ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್–ಜೂನ್ ತ್ರೈಮಾಸಿಕಕ್ಕೆ ಗರಿಷ್ಠ ಶೇ 0.70ರವರೆಗೆ ಹೆಚ್ಚಿಸಿದೆ. ಇದಕ್ಕೂ ಮೊದಲು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವು ಸತತ ಒಂಬತ್ತು ತ್ರೈಮಾಸಿಕಗಳಲ್ಲಿ ಯಾವ ಬದಲಾವಣೆಯನ್ನೂ ಕಂಡಿರಲಿಲ್ಲ.
ಆರ್ಬಿಐ ಅಂದಾಜಿನ ಅನ್ವಯ 1 ವರ್ಷದಿಂದ 2 ವರ್ಷಗಳವರೆಗಿನ, ಬ್ಯಾಂಕ್ ರಿಟೇಲ್ ಠೇವಣಿಗಳ ಮೇಲಿನ ಸರಾಸರಿ ಬಡ್ಡಿ ದರವು ಈಗ ಶೇ 6.9ರಷ್ಟು ಇದೆ. ಇದು 2022ರ ಸೆಪ್ಟೆಂಬರ್ನಲ್ಲಿ ಶೇ 5.8ರಷ್ಟು ಇತ್ತು.
ಮೂರು ವರ್ಷಗಳ ಅವಧಿಯ ಅಂಚೆ ಕಚೇರಿ ಅವಧಿ ಠೇವಣಿಯ ಬಡ್ಡಿದರವು ಶೇ 7ಕ್ಕೆ ತಲುಪಿದೆ. ಇದು ಈ ಮೊದಲು ಶೇ 5.5ರಷ್ಟು ಇತ್ತು. ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಎಸ್ಬಿಐ, ಎರಡು ವರ್ಷಕ್ಕಿಂತ ಹೆಚ್ಚಿನ ಹಾಗೂ ಮೂರು ವರ್ಷಕ್ಕಿಂತ ಕಡಿಮೆ ಅವಧಿಯ ಠೇವಣಿಗೆ ಶೇ 7ರಷ್ಟು ಬಡ್ಡಿ ನೀಡುತ್ತಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…