BREAKING NEWS

IND vs AUS 4th T20: ಮಿಂಚಿದ ಜೈಸ್ವಾಲ್‌, ರುತುರಾಜ್‌, ರಿಂಕು, ಜಿತೇಶ್; ಆಸ್ಟ್ರೇಲಿಯಾಗೆ 175 ರನ್‌ಗಳ ಗುರಿ

ಸದ್ಯ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 3 ಪಂದ್ಯಗಳು ಮುಕ್ತಾಯವಾಗಿದ್ದು ಇಂದು ( ಡಿಸೆಂಬರ್‌ 1 ) ನಾಲ್ಕನೇ ಪಂದ್ಯ ಜರುಗುತ್ತಿದೆ. ಮೊದಲ ಹಾಗೂ ಎರಡನೇ ಪಂದ್ಯದಲ್ಲಿ ಭಾರತ ಜಯ ಸಾಧಿಸಿದ್ದರೆ, ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದು ಟೂರ್ನಿ ಗೆಲ್ಲುವ ಕನಸನ್ನು ಜೀವಂತವಾಗಿಸಿಕೊಂಡಿತ್ತು.

ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದ್ದು, ಒಂದುವೇಳೆ ಆಸ್ಟ್ರೇಲಿಯಾ ಗೆದ್ದರೆ ಸರಣಿ ಸಮಬಲವಾಗಲಿದೆ. ಈ ಪಂದ್ಯ ರಾಯ್‌ಪುರದ ಶಹೀದ್‌ ವೀರ್‌ ನಾರಾಯಣ್‌ ಸಿಂಗ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್‌ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್‌ ಆಯ್ದುಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತ್ತು.

ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಟೀಮ್‌ ಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 174 ರನ್‌ ಗಳಿಸಿ ಆಸ್ಟ್ರೇಲಿಯಾಗೆ ಗೆಲ್ಲಲು 175 ರನ್‌ಗಳ ಗುರಿ ನೀಡಿದೆ.

ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್‌ ಹಾಗೂ ರುತುರಾಜ್‌ ಗಾಯಕ್ವಾಡ್‌ ಜೋಡಿ ಪವರ್‌ಪ್ಲೇನಲ್ಲಿ 50 ರನ್‌ಗಳ ಜತೆಯಾಟ ಆಡುವ ಮೂಲಕ ಉತ್ತಮ ಆರಂಭವನ್ನು ಕಟ್ಟಿಕೊಟ್ಟಿತು. ಯಶಸ್ವಿ ಜೈಸ್ವಾಲ್‌ 37 ರನ್‌ ಗಳಿಸಿದರೆ, ರುತುರಾಜ್‌ ಗಾಯಕ್ವಾಡ್‌ 32 ರನ್‌ ಕಲೆಹಾಕಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್‌ ಅಯ್ಯರ್‌ 8 ರನ್‌, ನಾಯಕ ಸೂರ್ಯಕುಮಾರ್‌ ಕೇವಲ 1 ರನ್‌ ಗಳಿಸಿ ನಿರಾಸೆ ಮೂಡಿಸಿದರು. ಬಳಿಕ ಅಬ್ಬರಿಸಿದ ಜಿತೇಶ್‌ ಶರ್ಮಾ 19 ಎಸೆತಗಳಲ್ಲಿ 3 ಸಿಕ್ಸರ್‌, 1 ಬೌಂಡರಿ ಸಹಿತ 35 ರನ್‌, ರಿಂಕು ಸಿಂಗ್‌ 29 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್‌ ಸಹಿತ 46 ರನ್‌ ಬಾರಿಸಿದರು. ಅಕ್ಷರ್ ಪಟೇಲ್‌ ಹಾಗೂ ದೀಪಕ್‌ ಚಹರ್‌ ಶೂನ್ಯ ಸುತ್ತಿದರೆ, ರವಿ ಬಿಷ್ಣೋಯಿ 4 ಹಾಗೂ ಅವೇಶ್‌ ಖಾನ್‌ ಅಜೇಯ 1 ರನ್‌ ಕಲೆಹಾಕಿದರು.

andolana

Recent Posts

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

9 mins ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

28 mins ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

1 hour ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

2 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

2 hours ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

2 hours ago