BREAKING NEWS

ಮತದಾನ ಪ್ರಕ್ರಿಯೆಯಲ್ಲಿ ನೂತನ ವಿಶ್ವದಾಖಲೆ ಬರೆದ ಭಾರತ: ಬರೋಬ್ಬರಿ 64.2 ಕೋಟಿ ಮತದಾನ

ನವದೆಹಲಿ: ರಾಷ್ಟ್ರ ರಾಜಕಾರಣದ ಬಹುಮುಖ್ಯ ಅಂಗವಾದ ಚುನಾವಣೆಯಲ್ಲಿ ಈ ಬಾರಿ ಭಾರತ ವಿನೂತನ ವಿಶ್ವ ದಾಖಲೆ ಬರೆದಿದೆ.

ಹೌದು ಒಟ್ಟು ಏಳು ಹಂತಗಳಲ್ಲಿ ನಡೆದಿದ್ದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತದಾನ ಮಾಡುವ ಮೂಲಕ ಭಾರತ ವಿಶ್ವ ದಾಖಲೆ ಬರೆದಿದೆ ಎಂದು ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯಕ್ತ ರಾಜೀವ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಈ ಬಾರಿ ಒಟ್ಟು 64.2 ಕೋಟಿ ಜನರು ಮತದಾನ ಮಾಡಿದ್ದಾರೆ. ಇದರಲ್ಲಿ ಮಹಿಳೆಯರು 31.2 ಕೋಟಿ ಹಾಗೂ ಪುರುಷರು 33 ಕೋಟಿ ಜನರು ಮತದಾನ ಮಾಡಿದ್ದಾರೆ. ಚುನಾವಣೆ ನಡೆಸಲು 68 ಸಾವಿರ ನಿಗಾ ತಂಡಗಳು ಹಾಗೂ 1.5 ಕೋಟಿ ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಚುನಾವಣೆಯಲ್ಲಿ ಬಾಗವಹಿಸಿದ್ದರು ಎಂದು ಅವರು ತಿಳಿಸಿದ್ದಾರೆ.

ಇದರ ಜತೆಗೆ 4 ಲಕ್ಷ ವಾಹನಗಳು 135 ವಿಶೇಷ ರೈಲುಗಳು ಮತ್ತು 1692 ವಿಶೇಷ ವಿಮಾನಗಳನ್ನು ಈ ಚುನಾವಣೆಗೆ ಬಳಸಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬೌದ್ಧ ಧರ್ಮಗುರು ದಲೈಲಾಮಾಗೆ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಗೌರವ

ಟಿಬೆಟ್‌ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ…

1 hour ago

ಮಂಡ್ಯ| ಸಿದ್ಧಗಂಗಾಶ್ರೀಗಳ ಆದರ್ಶ ಅಜರಾಮರ: ಯು.ಸಿ.ಶಿವಕುಮಾರ್‌

ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್‌ಮುಲ್‌ ಅಧ್ಯಕ್ಷ ಯು.ಸಿ.ಶಿವಕುಮಾರ್‌ ಹೇಳಿದರು. ಮಂಡ್ಯ ನಗರದ…

1 hour ago

ರಾಜ್ಯ ಸರ್ಕಾರ ಪಾಪರ್‌ ಆಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…

2 hours ago

ಚಾಮರಾಜನಗರ| ಫ್ಲೋರೈಡ್‌ ಮಿಶ್ರಿತ ನೀರು ಸೇವಿಸಿ ಕಿಡ್ನಿ ಕಳೆದುಕೊಂಡ 47 ಜನ

ಚಾಮರಾಜನಗರ: ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…

2 hours ago

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…

2 hours ago

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

4 hours ago