ಮಂಡ್ಯ: ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕುಂದನಿ ಬೆಟ್ಟದ ಮೇಲೆ ೧೫ ಕಟ್ಟೆ ಕಟ್ಟಿ ಪ್ರಸಿದ್ಧಿ ಪಡೆದಿದ್ದ ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ (೮೩) ಸೋಮವಾರ ನಸುಕಿನಲ್ಲಿ ನಿಧನರಾದರು.
ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ, ಅವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ೨ ಗಂಟೆಗೆ ನೆರವೇರಿತು. ಕಾಮೇಗೌಡರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ಕುರಿಗಾಹಿಯಾಗಿದ್ದ ಅವರು ಕುರಿ ಮಾರಿ ಸಂಪಾದಿಸಿದ ಹಣದಲ್ಲಿ ಬೆಟ್ಟದ ಮೇಲೆ ಕೆರೆ ಕಟ್ಟೆಗಳನ್ನು ತೋಡಿಸಿದ್ದರು. ಪ್ರತಿ ಕಟ್ಟೆಗೂ ದೇವರು ಹಾಗೂ ಮೊಮ್ಮಕ್ಕಳ ಹೆಸರು ಇಟ್ಟಿದ್ದರು. ಹಲವು ವರ್ಷಗಳಿಂದಲೂ ಕಟ್ಟೆಗಳನ್ನು ಸಂರಕ್ಷಿಸಿ ಬೆಟ್ಟದ ತಟದಲ್ಲಿ ಹಸಿರು ಪರಿಸರ ಇರುವಂತೆ ನೋಡಿಕೊಂಡಿದ್ದರು. ಬೆಟ್ಟದ ಮೇಲ್ಭಾಗ ಹಾಗೂ ತಟದಲ್ಲಿ ನೂರಾರು ಸಸಿ ನೆಟ್ಟು ಬೆಳೆಸಿದ್ದರು.
ಕಾಮೇಗೌಡರ ಪ್ರಕೃತಿ ಸಂರಕ್ಷಣೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿತ್ತು, ೨೦೨೦ರಲ್ಲಿ ‘ಮನ್ ಕಿ ಬಾತ್’ ಸರಣಿಯಲ್ಲಿ ಕಾಮೇಗೌಡರ ಸೇವೆಯನ್ನು ಕೊಂಡಾಡಿದ್ದರು. ರಾಷ್ಟ್ರಮಟ್ಟದಲ್ಲಿ ಹಲವು ನಾಯಕರು ಅವರ ಸೇವೆಯನ್ನು ಹೊಗಳಿದ್ದರು. ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಕೂಡ ಅವರ ಸೇವೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು. ಅವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ರಮಾಗೋವಿಂದ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಜಲ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಕೊಂಡು ಸುಮಾರು ೧೫ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎಂದೇ ಖ್ಯಾತಿ ಗಳಿಸಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಜಲಋಷಿ ಕಾಮೇಗೌಡರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ.
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ಅಂತರ್ಜಲ ವೃದ್ಧಿಯಲ್ಲಿ ದೇಶದ ಗಮನ ಸೆಳೆದಿದ್ದ, ೧೬ ಕೆರೆಗಳ ನಿರ್ಮಾತೃ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲ್ಮನೆ ಕಾಮೇಗೌಡ ಅವರ ನಿಧನದಿಂದ ಅತೀವ ನೋವಾಗಿದೆ. ಜಲ ಸಂರಕ್ಷಣೆ ಬಗ್ಗೆ ಅವರು ಹಾಕಿಕೊಟ್ಟ ಮೇಲ್ಪಂಕ್ತಿ ಅನುಕರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ
ಪರಿಸರ ಜೀವಿ, ಕೆರೆಗಳ ನಿರ್ಮಾಣದ ಮೂಲಕ ನೀರಿನ ಮಹತ್ವ ಸಾರಿದ ಕಲ್ಮನೆ ಕಾಮೇಗೌಡ ಇನ್ನಿಲ್ಲ ಎನ್ನುವ ಸುದ್ದಿ ಕೇಳಿ ಬಹಳ ನೋವಾಯಿತು. ಕುರಿ ಸಾಕಣೆ ಕಾಯಕದಲ್ಲಿ ತೊಡಗಿದ್ದ ಅವರು ತಮ್ಮ ದುಡಿಮೆ ಹಣದಲ್ಲಿಯೇ ೧೪ಕ್ಕೂ ಹೆಚ್ಚು ಕೆರೆ-ಕಟ್ಟೆ ನಿರ್ಮಾಣ ಮಾಡಿ ಸಕ್ಕರೆ ನಾಡಿನ ಆಧುನಿಕ ಭಗೀರಥರಾಗಿದ್ದರು.
-ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ
ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ…
ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ…
ರಾಹುಲ್ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…
ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…
ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…