BREAKING NEWS

ದೇಶದ ಗಮನವನ್ನು ಸೆಳೆದ 16 ಚೆಕ್ ಡ್ಯಾಂ ನಿರ್ಮಾತೃ ಖ್ಯಾತಿಯ ಕಾಮೇಗೌಡ ಇನ್ನಿಲ್ಲ

ಮಂಡ್ಯ: ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕುಂದನಿ ಬೆಟ್ಟದ ಮೇಲೆ ೧೫ ಕಟ್ಟೆ ಕಟ್ಟಿ ಪ್ರಸಿದ್ಧಿ ಪಡೆದಿದ್ದ ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ (೮೩) ಸೋಮವಾರ ನಸುಕಿನಲ್ಲಿ ನಿಧನರಾದರು.
ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ, ಅವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ೨ ಗಂಟೆಗೆ ನೆರವೇರಿತು. ಕಾಮೇಗೌಡರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ಕುರಿಗಾಹಿಯಾಗಿದ್ದ ಅವರು ಕುರಿ ಮಾರಿ ಸಂಪಾದಿಸಿದ ಹಣದಲ್ಲಿ ಬೆಟ್ಟದ ಮೇಲೆ ಕೆರೆ ಕಟ್ಟೆಗಳನ್ನು ತೋಡಿಸಿದ್ದರು. ಪ್ರತಿ ಕಟ್ಟೆಗೂ ದೇವರು ಹಾಗೂ ಮೊಮ್ಮಕ್ಕಳ ಹೆಸರು ಇಟ್ಟಿದ್ದರು. ಹಲವು ವರ್ಷಗಳಿಂದಲೂ ಕಟ್ಟೆಗಳನ್ನು ಸಂರಕ್ಷಿಸಿ ಬೆಟ್ಟದ ತಟದಲ್ಲಿ ಹಸಿರು ಪರಿಸರ ಇರುವಂತೆ ನೋಡಿಕೊಂಡಿದ್ದರು. ಬೆಟ್ಟದ ಮೇಲ್ಭಾಗ ಹಾಗೂ ತಟದಲ್ಲಿ ನೂರಾರು ಸಸಿ ನೆಟ್ಟು ಬೆಳೆಸಿದ್ದರು.
ಕಾಮೇಗೌಡರ ಪ್ರಕೃತಿ ಸಂರಕ್ಷಣೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿತ್ತು, ೨೦೨೦ರಲ್ಲಿ ‘ಮನ್ ಕಿ ಬಾತ್’ ಸರಣಿಯಲ್ಲಿ ಕಾಮೇಗೌಡರ ಸೇವೆಯನ್ನು ಕೊಂಡಾಡಿದ್ದರು. ರಾಷ್ಟ್ರಮಟ್ಟದಲ್ಲಿ ಹಲವು ನಾಯಕರು ಅವರ ಸೇವೆಯನ್ನು ಹೊಗಳಿದ್ದರು. ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಕೂಡ ಅವರ ಸೇವೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು. ಅವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ರಮಾಗೋವಿಂದ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಜಲ ಸಂರಕ್ಷಣೆ ಕಾರ್ಯದಲ್ಲಿ ತೊಡಗಿಕೊಂಡು ಸುಮಾರು ೧೫ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎಂದೇ ಖ್ಯಾತಿ ಗಳಿಸಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಜಲಋಷಿ ಕಾಮೇಗೌಡರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ.
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಅಂತರ್ಜಲ ವೃದ್ಧಿಯಲ್ಲಿ ದೇಶದ ಗಮನ ಸೆಳೆದಿದ್ದ, ೧೬ ಕೆರೆಗಳ ನಿರ್ಮಾತೃ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲ್ಮನೆ ಕಾಮೇಗೌಡ ಅವರ ನಿಧನದಿಂದ ಅತೀವ ನೋವಾಗಿದೆ. ಜಲ ಸಂರಕ್ಷಣೆ ಬಗ್ಗೆ ಅವರು ಹಾಕಿಕೊಟ್ಟ ಮೇಲ್ಪಂಕ್ತಿ ಅನುಕರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

ಪರಿಸರ ಜೀವಿ, ಕೆರೆಗಳ ನಿರ್ಮಾಣದ ಮೂಲಕ ನೀರಿನ ಮಹತ್ವ ಸಾರಿದ ಕಲ್ಮನೆ ಕಾಮೇಗೌಡ ಇನ್ನಿಲ್ಲ ಎನ್ನುವ ಸುದ್ದಿ ಕೇಳಿ ಬಹಳ ನೋವಾಯಿತು. ಕುರಿ ಸಾಕಣೆ ಕಾಯಕದಲ್ಲಿ ತೊಡಗಿದ್ದ ಅವರು ತಮ್ಮ ದುಡಿಮೆ ಹಣದಲ್ಲಿಯೇ ೧೪ಕ್ಕೂ ಹೆಚ್ಚು ಕೆರೆ-ಕಟ್ಟೆ ನಿರ್ಮಾಣ ಮಾಡಿ ಸಕ್ಕರೆ ನಾಡಿನ ಆಧುನಿಕ ಭಗೀರಥರಾಗಿದ್ದರು.
-ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

andolanait

Recent Posts

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

5 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

5 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…

5 hours ago

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

7 hours ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

7 hours ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

7 hours ago