BREAKING NEWS

ಜನಸಂಖ್ಯೆಯಲ್ಲಿ ಚೀನಾವನ್ನೇ ಹಿಂದಿಕ್ಕಿದ ಭಾರತ

ನವದೆಹಲಿ : ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಭಾರತ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರವಾಗಿದೆ. ಆ ಮೂಲಕ ಜನಸಂಖ್ಯೆಯಲ್ಲಿ ನೆರೆಯ ದೇಶ ಚೀನಾವನ್ನೇ ಹಿಂದಿಕ್ಕಿದೆ.

ಭಾರತ 142.86 ಕೋಟಿ ಜನಸಂಖ್ಯೆ ಹೊಂದಿದ್ದರೆ, ಚೀನಾ 142.57 ಕೋಟಿ ಜನಸಂಖ್ಯೆ ಹೊಂದಿದೆ.
ಭಾರತದ ಜನಸಂಖ್ಯೆಯ ಸುಮಾರು 1/4 ರಷ್ಟು ಜನರು 14 ವರ್ಷದ ಒಳಗಿನವರಾಗಿದ್ದಾರೆ. ಜನಸಂಖ್ಯೆಯ ಶೇಕಡಾ 68ರಷ್ಟು ಜನರು 15 ರಿಂದ 64 ವಯಸ್ಸಿನವರಾಗಿದ್ದರೆ, ಶೇಕಡಾ 7ರಷ್ಟು ಜನರು 65 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ ಎಂದು ವಿಶ್ವಸಂಸ್ಥೆ ವರದಿ ಮಾಡಿದೆ. ಚೀನಾದಲ್ಲಿ ವಯಸ್ಕರ ಪ್ರಮಾಣ ಹೆಚ್ಚಿದ್ದರೆ, ಭಾರತ ಯುವ ಶಕ್ತಿಯಿಂದ ಕೂಡಿದೆ ಎಂದು ತಿಳಿಸಿದೆ.

ಇತ್ತೀಚಿನ ವರ್ಷಗಳಲ್ಲಿ ಚೀನಾದಲ್ಲಿ ಮಕ್ಕಳ ಜನನ ಪ್ರಮಾಣದಲ್ಲಿ ತೀವ್ರ ಕುಸಿತ ಕಂಡಿದೆ. ವಯಸ್ಕರ ಪ್ರಮಾಣದಲ್ಲಿ ಏರಿಕೆಯಾಗಿದೆ. ಜನನ ಪ್ರಮಾಣವನ್ನು ಹೆಚ್ಚಿಸಲು ಚೀನಾ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿತ್ತು. ಆದರೆ, ಈ ಯಾವ ಯೋಜನೆಗಳೂ ಉದ್ದೇಶಿತ ಫಲಿತಾಂಶವನ್ನು ನೀಡಿರಲಿಲ್ಲ.

1950ರಿಂದಲೂ ವಿಶ್ವಸಂಸ್ಥೆ ಎಲ್ಲ ದೇಶಗಳ ಜನಸಂಖ್ಯೆಯ ಪ್ರಮಾಣವನ್ನು ಬಿಡುಗಡೆ ಮಾಡುತ್ತಿದ್ದು, ಇದೇ ಮೊದಲ ಬಾರಿಗೆ ಭಾರತ ಎಲ್ಲ ದೇಶಗಳನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದೆ. ಪ್ರತಿ ಹತ್ತು ವರ್ಷಕ್ಕೊಮ್ಮೆ ಭಾರತ ಸರ್ಕಾರ ಜನಗಣತಿ ನಡೆಸುತ್ತಾ ಬಂದಿದೆ. 2011ರಲ್ಲಿ ಜನಗಣತಿ ನಡೆಸಿದ್ದು, ಕೊರೊನಾ ಕಾರಣಕ್ಕೆ 2021ರಲ್ಲಿ ನಡೆಯಬೇಕಿದ್ದ ಜನಗಣತಿ ಪ್ರಕ್ರಿಯೆ ನಿಂತು ಹೋಗಿತ್ತು. ಈ ಕಾರಣಕ್ಕೆ ಭಾರತದಲ್ಲಿ ಎಷ್ಟು ಜನಸಂಖ್ಯೆ ಪ್ರಮಾಣ ಹೆಚ್ಚಿದೆ ಎಂಬ ಮಾಹಿತಿ ತಿಳಿದಿರಲಿಲ್ಲ.

ಸಂಸ್ಥೆಯೊಂದು ನಡೆಸಿದ ಅಧ್ಯಯನದ ಪ್ರಕಾರ ಇನ್ನೂ ಮೂರು ದಶಕಗಳ ಕಾಲ ಭಾರತದ ಜನಸಂಖ್ಯೆ ಏರಿಕೆಯಾಗಲಿದೆ. ಭಾರತದ ಜನಸಂಖ್ಯೆ 165 ಕೋಟಿ ತಲುಪಿದ ನಂತರ ಜನಸಂಖ್ಯೆಯಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

lokesh

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

6 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

6 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

6 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

6 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

6 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

6 hours ago