ನವದೆಹಲಿ : ಭಾರತ ದೇಶದಲ್ಲಿ ಯಶಸ್ವಿಯಾಗುವ ಪರಿಹಾರಗಳು ಜಗತ್ತಿನ ಯಾವ ಕಡೆಗಳಲ್ಲಿಯೂ ಸಹ ಅನ್ವಯ ಮಾಡಬಹುದು, ಭಾರತ ದೇಶದ ಡಿಜಿಟಲ್ ಸಾರ್ವಜನಿಕ ಮೂಲಭೂತ ಸೌಕರ್ಯಗಳು ಉತ್ತಮವಾಗಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಅವರು ಬೆಂಗಳೂರಿನಲ್ಲಿಂದು ಜಿ20 ಡಿಜಿಟಲ್ ಆರ್ಥಿಕ ಸಚಿವರುಗಳ ಸಭೆಯನ್ನುದ್ದೇಶಿಸಿ ಮಾತನಾಡಿ, ಭಾರತದ ಡಿಜಿಟಲ್ ಸಾರ್ವಜನಿಕ ಮೂಲಭೂತ ಸೌಕರ್ಯಗಳು ಜಾಗತಿಕ ಸವಾಲುಗಳಿಗೆ ಅಳೆಯಬಹುದಾದ ಸುರಕ್ಷಿತ ಮತ್ತು ಅಂತರ್ಗತ ಪರಿಹಾರಗಳಾಗಿವೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಹಲವು ಉಪಕ್ರಮಗಳನ್ನು ಉಲ್ಲೇಖಿಸಿದ ಅವರು, ಕಳೆದ 9 ವರ್ಷಗಳಲ್ಲಿ ಭಾರತ ಅಭೂತಪೂರ್ವ ಡಿಜಿಟಲ್ ರೂಪಾಂತರವನ್ನು ಹೊಂದಿದೆ. 2015ರಲ್ಲಿ ಡಿಜಿಟಲ್ ಇಂಡಿಯಾ ಅಭಿಯಾನದ ಮೂಲಕ ಆರಂಭವಾಯಿತು. ಸಂಶೋಧನೆಯಲ್ಲಿ ನಾವು ಅಸಾಧಾರಣ ಪ್ರಗತಿ ಸಾಧಿಸಿದ್ದು, ಆಂತರಿಕ ಬೆಳವಣಿಗೆ ಬಗ್ಗೆ ತ್ವರಿತ ಜಾರಿ ಮತ್ತು ನಮ್ಮ ಉತ್ಸಾಹದಲ್ಲಿನ ಬದ್ಧತೆಯನ್ನು ತೋರಿಸುತ್ತದೆ ಎಂದಿದ್ದಾರೆ.
ಸರ್ಕಾರದ ಇಂತಹ ಕೆಲವು ಉಪಕ್ರಮಗಳನ್ನು ಉಲ್ಲೇಖಿಸಿದ ಅವರು, ಸರ್ಕಾರ ಭಾಷಿಣಿಯನ್ನು ನಿರ್ಮಾಣ ಮಾಡುತ್ತಿದ್ದು, ಇದು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆಧಾರಿತ ಭಾಷಾ ಅನುವಾದ ವೇದಿಕೆಯಾಗಿದೆ. ಇದು ಭಾರತದ ವೈವಿಧ್ಯಮಯ ಭಾಷೆಗಳ ಡಿಜಿಟಲ್ ಆಂತರಿಕ ಬೆಳವಣಿಗೆಗಳಿಗೆ ಒತ್ತು ನೀಡುತ್ತದೆ ಎಂದಿದ್ದಾರೆ.
ಕೇಂದ್ರ ಸರ್ಕಾರ ಒಂದು ಆನ್ ಲೈನ್ ಜಾಗತಿಕ ಸಾರ್ವಜನಿಕ ಡಿಜಿಟಲ್ ಗೂಡ್ಸ್ ಡೆಪಾಸಿಟರಿ ಇಂಡಿಯಾ ಸ್ಟಾಕ್ಸ್ ನ್ನು ರಚಿಸಿದ್ದು ಎಲ್ಲರನ್ನೂ ಒಳಗೊಂಡ ಬೆಳವಣಿಗೆಯೇ ಇದರ ಮೂಲ ಉದ್ದೇಶವಾಗಿದೆ ಎಂದರು.
ಭಾರತದ ಡಿಜಿಟಲ್ ರೂಪಾಂತರ ಬಗ್ಗೆ ಮಾತನಾಡಿದ ಅವರು, ಭಾರತದಲ್ಲಿ ಇಂದು 850 ಮಿಲಿಯನ್ ಇಂಟರ್ನೆಟ್ ಬಳಕೆದಾರರಿದ್ದು ಜಗತ್ತಿನಲ್ಲಿಯೇ ಕೆಲವು ಅಗ್ಗದ ಡಾಟಾ ವೆಚ್ಚವನ್ನು ಹೊಂದಿದೆ. ಸರ್ಕಾರದ ಆಡಳಿತವನ್ನು ಜನರಿಗೆ ತ್ವರಿತವಾಗಿ ತಲುಪಿಸಲು ನಮ್ಮಲ್ಲಿ ಕೆಲವು ಪ್ರಮುಖ ತಂತ್ರಜ್ಞಾನಗಳಿವೆ. ಅವು ಹೆಚ್ಚು ದಕ್ಷವಾಗಿದ್ದು, ಎಲ್ಲರನ್ನೂ ಒಳಗೊಂಡ, ಅತಿ ತ್ವರಿತ ಮತ್ತು ದಕ್ಷವಾದ ತಂತ್ರಜ್ಞಾನವಾಗಿದೆ ಎಂದರು.
ಜಗತ್ತಿನಲ್ಲಿ ನಿಖರ ಸಮಯದ ಹಣ ಪಾವತಿಗಳು ಭಾರತದಲ್ಲಿ ಸಾಗುತ್ತಿದ್ದು, ಶೇಕಡಾ 45ರಷ್ಟು ರಿಯಲ್ ಟೈಮ್ ಪೇಮೆಂಟ್ ಭಾರತದಲ್ಲಿ ಆಗುತ್ತಿದೆ. 10 ಬಿಲಿಯನ್ ಗಿಂತಲೂ ಅಧಿಕ ವಹಿವಾಟುಗಳು ಯುಪಿಐ ಮೂಲಕ ಪ್ರತಿ ತಿಂಗಳು ನಡೆಯುತ್ತದೆ.COWIN ಪೋರ್ಟಲ್ ಭಾರತದ ವ್ಯಾಕ್ಸಿನೇಷನ್ ಅಭಿಯಾನವನ್ನು ಬೆಂಬಲಿಸಿದೆ ಎಂದು ಪಿಎಂ ನರೇಂದ್ರ ಮೋದಿ ಜಿ 20 ಡಿಜಿಟಲ್ ಆರ್ಥಿಕ ಮಂತ್ರಿಗಳ ಸಭೆಯಲ್ಲಿ ತಮ್ಮ ವರ್ಚುವಲ್ ಭಾಷಣದಲ್ಲಿ ಹೇಳಿದರು.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…