BREAKING NEWS

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 125 ದೇಶಗಳ ಪೈಕಿ ಭಾರತಕ್ಕೆ 111ನೇ ಸ್ಥಾನ

ನವದೆಹಲಿ : ಗುರುವಾರ ಬಿಡುಗಡೆಯಾದ ಜಾಗತಿಕ ಹಸಿವಿನ ಸೂಚ್ಯಂಕ 2023 ರಲ್ಲಿ ಭಾರತ ಜಗತ್ತಿನ 125 ದೇಶಗಳ ಪೈಕಿ 111ನೇ ಸ್ಥಾನ ಪಡೆದಿದೆ. ಆದರೆ ಈ ರ್ಯಾಂಕಿಂಗ್‌ ಬಗ್ಗೆ ಆಕ್ಷೇಪಿಸಿರುವ ಭಾರತ ಸರ್ಕಾರ ಅದು ದೋಷದಿಂದ ಕೂಡಿದೆ ಮತ್ತು ದುರುದ್ದೇಶ ಹೊಂದಿದೆ ಎಂದು ಹೇಳಿದೆ.

ಗುರುವಾರ ಬಿಡುಗಡೆಗೊಂಡ ಸೂಚ್ಯಂಕದಲ್ಲಿ ಭಾರತಕ್ಕೆ 28.7 ಅಂಕಗಳು ದೊರಕಿದ್ದು ದೇಶದಲ್ಲಿ ಹಸಿವಿನ ಪ್ರಮಾಣದ ಗಂಭೀರತೆಯನ್ನು ಇದು ಸೂಚಿಸಿದೆ. ಈ ಸೂಚ್ಯಂಕದಲ್ಲಿ ನೆರೆಯ ದೇಶಗಳಾದ ಪಾಕಿಸ್ತಾನ 102ನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ 81ನೇ ಸ್ಥಾನದಲ್ಲಿ, ನೇಪಾಳ 69ನೇ ಸ್ಥಾನದಲ್ಲಿ ಮತ್ತು ಶ್ರೀಲಂಕಾ 60ನೇ ಸ್ಥಾನದಲ್ಲಿವೆ.

ಭಾರತದಲ್ಲಿ ಅಪೌಷ್ಠಿಕಾಂಶದ ಕೊರತೆಯು ಶೇ 16.6 ರಷ್ಟಿದ್ದರೆ ಐದು ವರ್ಷದ ಕೆಳಗಿನ ಮಕ್ಕಳ ಮರಣ ಪ್ರಮಾಣ ಶೇ 3.1 ಇದೆ. ಹದಿನೈದು ಮತ್ತು 24 ವರ್ಷ ಪ್ರಾಯದ ಮಹಿಳೆಯರಲ್ಲಿ ರಕ್ತಹೀನತೆಯ ಪ್ರಮಾಣ ಶೇ 58.1ರಷ್ಟಿದೆ ಎಂದು ವರದಿ ಹೇಳಿದೆ.

ಈ ಜಾಗತಿಕ ಹಸಿವಿನ ಸೂಚ್ಯಂಕವನ್ನು ತಿರಸ್ಕರಿಸಿರುವ ಭಾರತ ಸರ್ಕಾರ, ಹಸಿವನ್ನು ಮಾಪನ ಮಾಡುವ ಕ್ರಮ ದೋಷಪೂರಿತವಾಗಿದೆ ಹಾಗೂ ಭಾರತದ ವಾಸ್ತವ ಚಿತ್ರಣವನ್ನು ಬಿಂಬಿಸುವುದಿಲ್ಲ ಎಂದು ಹೇಳಿದೆ.

ಈ ಸೂಚ್ಯಂಕ ಸಿದ್ಧಪಡಿಸಿದ ರೀತಿಯಲ್ಲಿ ಹಲವು ದೋಷಗಳಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಹೇಳಿದೆ.

2022 ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 121 ದೇಶಗಳ ಪಟ್ಟಿಯಲ್ಲಿ ಭಾರತ 107ನೇ ಸ್ಥಾನ ಪಡೆದಿತ್ತು.

andolanait

Recent Posts

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

1 hour ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

1 hour ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

2 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

3 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

3 hours ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

4 hours ago