BREAKING NEWS

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 125 ದೇಶಗಳ ಪೈಕಿ ಭಾರತಕ್ಕೆ 111ನೇ ಸ್ಥಾನ

ನವದೆಹಲಿ : ಗುರುವಾರ ಬಿಡುಗಡೆಯಾದ ಜಾಗತಿಕ ಹಸಿವಿನ ಸೂಚ್ಯಂಕ 2023 ರಲ್ಲಿ ಭಾರತ ಜಗತ್ತಿನ 125 ದೇಶಗಳ ಪೈಕಿ 111ನೇ ಸ್ಥಾನ ಪಡೆದಿದೆ. ಆದರೆ ಈ ರ್ಯಾಂಕಿಂಗ್‌ ಬಗ್ಗೆ ಆಕ್ಷೇಪಿಸಿರುವ ಭಾರತ ಸರ್ಕಾರ ಅದು ದೋಷದಿಂದ ಕೂಡಿದೆ ಮತ್ತು ದುರುದ್ದೇಶ ಹೊಂದಿದೆ ಎಂದು ಹೇಳಿದೆ.

ಗುರುವಾರ ಬಿಡುಗಡೆಗೊಂಡ ಸೂಚ್ಯಂಕದಲ್ಲಿ ಭಾರತಕ್ಕೆ 28.7 ಅಂಕಗಳು ದೊರಕಿದ್ದು ದೇಶದಲ್ಲಿ ಹಸಿವಿನ ಪ್ರಮಾಣದ ಗಂಭೀರತೆಯನ್ನು ಇದು ಸೂಚಿಸಿದೆ. ಈ ಸೂಚ್ಯಂಕದಲ್ಲಿ ನೆರೆಯ ದೇಶಗಳಾದ ಪಾಕಿಸ್ತಾನ 102ನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ 81ನೇ ಸ್ಥಾನದಲ್ಲಿ, ನೇಪಾಳ 69ನೇ ಸ್ಥಾನದಲ್ಲಿ ಮತ್ತು ಶ್ರೀಲಂಕಾ 60ನೇ ಸ್ಥಾನದಲ್ಲಿವೆ.

ಭಾರತದಲ್ಲಿ ಅಪೌಷ್ಠಿಕಾಂಶದ ಕೊರತೆಯು ಶೇ 16.6 ರಷ್ಟಿದ್ದರೆ ಐದು ವರ್ಷದ ಕೆಳಗಿನ ಮಕ್ಕಳ ಮರಣ ಪ್ರಮಾಣ ಶೇ 3.1 ಇದೆ. ಹದಿನೈದು ಮತ್ತು 24 ವರ್ಷ ಪ್ರಾಯದ ಮಹಿಳೆಯರಲ್ಲಿ ರಕ್ತಹೀನತೆಯ ಪ್ರಮಾಣ ಶೇ 58.1ರಷ್ಟಿದೆ ಎಂದು ವರದಿ ಹೇಳಿದೆ.

ಈ ಜಾಗತಿಕ ಹಸಿವಿನ ಸೂಚ್ಯಂಕವನ್ನು ತಿರಸ್ಕರಿಸಿರುವ ಭಾರತ ಸರ್ಕಾರ, ಹಸಿವನ್ನು ಮಾಪನ ಮಾಡುವ ಕ್ರಮ ದೋಷಪೂರಿತವಾಗಿದೆ ಹಾಗೂ ಭಾರತದ ವಾಸ್ತವ ಚಿತ್ರಣವನ್ನು ಬಿಂಬಿಸುವುದಿಲ್ಲ ಎಂದು ಹೇಳಿದೆ.

ಈ ಸೂಚ್ಯಂಕ ಸಿದ್ಧಪಡಿಸಿದ ರೀತಿಯಲ್ಲಿ ಹಲವು ದೋಷಗಳಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಹೇಳಿದೆ.

2022 ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 121 ದೇಶಗಳ ಪಟ್ಟಿಯಲ್ಲಿ ಭಾರತ 107ನೇ ಸ್ಥಾನ ಪಡೆದಿತ್ತು.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago