BREAKING NEWS

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 125 ದೇಶಗಳ ಪೈಕಿ ಭಾರತಕ್ಕೆ 111ನೇ ಸ್ಥಾನ

ನವದೆಹಲಿ : ಗುರುವಾರ ಬಿಡುಗಡೆಯಾದ ಜಾಗತಿಕ ಹಸಿವಿನ ಸೂಚ್ಯಂಕ 2023 ರಲ್ಲಿ ಭಾರತ ಜಗತ್ತಿನ 125 ದೇಶಗಳ ಪೈಕಿ 111ನೇ ಸ್ಥಾನ ಪಡೆದಿದೆ. ಆದರೆ ಈ ರ್ಯಾಂಕಿಂಗ್‌ ಬಗ್ಗೆ ಆಕ್ಷೇಪಿಸಿರುವ ಭಾರತ ಸರ್ಕಾರ ಅದು ದೋಷದಿಂದ ಕೂಡಿದೆ ಮತ್ತು ದುರುದ್ದೇಶ ಹೊಂದಿದೆ ಎಂದು ಹೇಳಿದೆ.

ಗುರುವಾರ ಬಿಡುಗಡೆಗೊಂಡ ಸೂಚ್ಯಂಕದಲ್ಲಿ ಭಾರತಕ್ಕೆ 28.7 ಅಂಕಗಳು ದೊರಕಿದ್ದು ದೇಶದಲ್ಲಿ ಹಸಿವಿನ ಪ್ರಮಾಣದ ಗಂಭೀರತೆಯನ್ನು ಇದು ಸೂಚಿಸಿದೆ. ಈ ಸೂಚ್ಯಂಕದಲ್ಲಿ ನೆರೆಯ ದೇಶಗಳಾದ ಪಾಕಿಸ್ತಾನ 102ನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ 81ನೇ ಸ್ಥಾನದಲ್ಲಿ, ನೇಪಾಳ 69ನೇ ಸ್ಥಾನದಲ್ಲಿ ಮತ್ತು ಶ್ರೀಲಂಕಾ 60ನೇ ಸ್ಥಾನದಲ್ಲಿವೆ.

ಭಾರತದಲ್ಲಿ ಅಪೌಷ್ಠಿಕಾಂಶದ ಕೊರತೆಯು ಶೇ 16.6 ರಷ್ಟಿದ್ದರೆ ಐದು ವರ್ಷದ ಕೆಳಗಿನ ಮಕ್ಕಳ ಮರಣ ಪ್ರಮಾಣ ಶೇ 3.1 ಇದೆ. ಹದಿನೈದು ಮತ್ತು 24 ವರ್ಷ ಪ್ರಾಯದ ಮಹಿಳೆಯರಲ್ಲಿ ರಕ್ತಹೀನತೆಯ ಪ್ರಮಾಣ ಶೇ 58.1ರಷ್ಟಿದೆ ಎಂದು ವರದಿ ಹೇಳಿದೆ.

ಈ ಜಾಗತಿಕ ಹಸಿವಿನ ಸೂಚ್ಯಂಕವನ್ನು ತಿರಸ್ಕರಿಸಿರುವ ಭಾರತ ಸರ್ಕಾರ, ಹಸಿವನ್ನು ಮಾಪನ ಮಾಡುವ ಕ್ರಮ ದೋಷಪೂರಿತವಾಗಿದೆ ಹಾಗೂ ಭಾರತದ ವಾಸ್ತವ ಚಿತ್ರಣವನ್ನು ಬಿಂಬಿಸುವುದಿಲ್ಲ ಎಂದು ಹೇಳಿದೆ.

ಈ ಸೂಚ್ಯಂಕ ಸಿದ್ಧಪಡಿಸಿದ ರೀತಿಯಲ್ಲಿ ಹಲವು ದೋಷಗಳಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಹೇಳಿದೆ.

2022 ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 121 ದೇಶಗಳ ಪಟ್ಟಿಯಲ್ಲಿ ಭಾರತ 107ನೇ ಸ್ಥಾನ ಪಡೆದಿತ್ತು.

andolanait

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

47 mins ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

1 hour ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

1 hour ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

2 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

2 hours ago

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

3 hours ago